ಬೆಳಗಾವಿ: ಸರ್ಕಾರದ ವಿರುದ್ಧ ಹೋರಾಟದ ಬದಲಾಗಿ ಮೊದಲು ಆಂತರಿಕ ಭಿನ್ನಮತ ಬಗೆಹರಿಸಲಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಪ್ರತಿಭಟನೆ ಮಾಡುವ ವಿಚಾರವಾಗಿ ಲೇವಡಿ ಮಾಡಿದರು. ಯಡಿಯೂರಪ್ಪ ಅವರು ಸರ್ಕಾರದ ವಿರುದ್ಧ ಹೋರಾಟ ಮಾಡುವುದು ಬೇಡ. ಮೊದಲು ಅವರ ಪಕ್ಷವನ್ನು ಸರಿ ಮಾಡಿಕೊಳ್ಳಲಿ. ಆಂತರಿಕ ಕಚ್ಚಾಟ ನಿಲ್ಲಿಸುವ ಕೆಲಸ ಮಾಡಲಿ ಎಂದರು.
Crispy Nippattu Recipe: ಈ ಚಳಿಗೆ ಬಿಸಿ ಬಿಸಿ ಗರಿ ಗರಿಯಾದ ನಿಪ್ಪಟ್ಟು ಮಾಡಬಹುದು ನೋಡಿ..!
ಸದನದಲ್ಲಿ ಬಿಜೆಪಿ ಸದಸ್ಯರು ಒಗ್ಗಟ್ಟಿನಿಂದ ಇಲ್ಲ. ಸದನ ನಡೆಯುತ್ತಿದ್ದರೂ ರೈತರ, ಉತ್ತರ ಕರ್ನಾಟಕ, ಬರದ ವಿಚಾರ ಚರ್ಚೆ ಮಾಡುತ್ತಿಲ್ಲ. ಬರ ಪರಿಹಾರ ಕೊಟ್ಟಿಲ್ಲ ಅಂತ ನಮ್ಮ ಮೇಲೆ ಹೇಳ್ತಿದ್ದಾರೆ. ಯಡಿಯೂರಪ್ಪ ಅವರು ಮೊದಲು ಕೇಂದ್ರ ಏನು ಪರಿಹಾರ ಕೊಟ್ಟಿದೆ ಅಂತ ಮಾತಾಡಲಿ ಎಂದು ಸವಾಲು ಹಾಕಿದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಉಳಿದವರು ಜೋರಾಗಿ ಸರ್ಕಾರದ ಬಗ್ಗೆ ಮಾತಾಡ್ತಾರೆ. ಆದರೆ ಕೇಂದ್ರದ ಬಗ್ಗೆ ಮಾತಾಡಲಿ. ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಮಾತಾಡಲಿ. ಬರ ಪರಿಹಾರ ಕೇಳುವ ಕೆಲಸ ಮಾಡಲಿ ಎಂದು ಆಗ್ರಹಿಸಿದರು.