ಮಂಗಳೂರು: ನರೇಂದ್ರ ಮೋದಿ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದು ದೇವೇಗೌಡರು ಹೇಳಿದ್ದರು ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದೇಕೆ? ಎಂದು ಪ್ರಶ್ನಿಸಿದರು.
ಈ ಹಿಂದೆ ದೇವೇಗೌಡರು, ಮೋದಿ ಪ್ರಧಾನಮಂತ್ರಿಯಾದರೆ ದೇಶಬಿಟ್ಟು ಹೋಗುತ್ತೇವೆ ಎಂದಿದ್ದರು. ಅದಕ್ಕೆ ಮೋದಿ ಅವರು ನಮ್ಮ ಮನೆಗೆ ಬನ್ನಿ ಜಾಗ ಕೊಡುತ್ತೇನೆ ಎಂದಿದ್ದರು. ಆದರೆ ಇಂದು ದೇವೇಗೌಡರು, ನಾನೇ ನನ್ನ ಮಗನನ್ನು ಬಿಜೆಪಿ ಜತೆ ಹೋಗಲು ಹೇಳಿದ್ದೇನೆ ಎನ್ನುತ್ತಿದ್ದಾರೆ ಎಂದರು.
ಬಟ್ಟೆ ಒಗೆದ ತಕ್ಷಣ ವಾಷಿಂಗ್ ಮಷೀನ್ ಮುಚ್ಚಬಾರದಂತೆ! – ಕಾರಣ ಏನು ಗೊತ್ತಾ!?
ರಾಜಕಾರಣದಲ್ಲಿ ಯಾರು ಯಾವುದೇ ನಿರ್ಧಾರ ಮಾಡಿಕೊಳ್ಳಲಿ. ಯಾರೇ ಒಂದಾಗಲಿ, ನಾವು ಚಿಂತೆ ಮಾಡುವುದು ಬೇಡ. ನಮ್ಮ ಸಿದ್ಧಾಂತ, ನಂಬಿಕೆ, ತತ್ವ, ನೀತಿ ಮೇಲೆ ಕೆಲಸ ಮಾಡೋಣ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಎಲ್ಲಾ ವರ್ಗದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕಾಂಗ್ರೆಸ್ ಸಿದ್ಧಾಂತ ನಾವು ಉಳಿಸಿಕೊಳ್ಳಬೇಕು ಎಂದು ಹೇಳಿದರು.