ಚಾಮರಾಜನಗರ: ಕಾರ್ಯಪಾಲಕ ಇಂಜನೀಯರ್ ರವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಟಗರಪುರ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾರ್ಯಪಾಲಕ ಇಂಜನೀಯರ್ ಆಗಿದ್ದ ರವಿಕುಮಾರ್ ಅವರ ಮನೆ ಮೇಲೆ ಚಾಮರಾಜನಗರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆಸ್ತಿ ದಾಖಲೆ ಮತ್ತು ಅಕ್ರಮ ಸಂಪತ್ತಿನ ಬಗ್ಗೆ ಶೋಧ ನಡೆಸುತ್ತಿದ್ದಾರೆ.
ಇನ್ನು, ಮೈಸೂರಿನಲ್ಲಿ ರವಿಕುಮಾರ್ ಮನೆ ಮತ್ತು ಅವರ ಬಾಮೈದುನನ ಮನೆ ಹಾಗೂ ಆಲಗಳ್ಳಿಯಲ್ಲಿರುವ ತಂದೆ ಮನೆಯಲ್ಲಿ ಏಕಕಾಲಕ್ಕೆ ಲೋಕ ಪೊಲೀಸರು ಈ ದಾಳಿ ನಡೆಸಿದ್ದಾರೆ.