ಬೆಂಗಳೂರು:- ಲಕ್ಷಾಂತರ ಹಣ ಬೇಡಿಕೆ ದೂರು ಹಿನ್ನೆಲೆ ಬಿಬಿಎಂಪಿ ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.
ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಪ್ರಕರಣದ ತನಿಖಾ ತಂಡಕ್ಕೆ ಸಿದ್ದರಾಮಯ್ಯ ಮೆಚ್ಚುಗೆ!
ಹಲವು ದೂರುಗಳು ಬಂದ ಹಿನ್ನೆಲೆ ಸುಮಾರು 10ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಕ್ಷೆ ಮಂಜೂರಾತಿ ವೇಳೆ ಲಕ್ಷಾಂತರ ಹಣ ಬೇಡಿಕೆ ಬಗ್ಗೆ ದೂರು ಬಂದಿವೆ.
40 ಸಾವಿರ ರೂ. ಲಂಚ ಸ್ವೀಕರಿಸುವಾಗ ಸರ್ವೆ ಅಧಿಕಾರಿ, ಆರ್ಐ ಲೋಕಾ ಬಲೆಗೆ ಬಿದ್ದಿರುವಂತಹ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತಾಲೂಕು ಸರ್ವೆ ಅಧಿಕಾರಿ ಅಶ್ವಿನಿ, ಕಂದಾಯ ನಿರೀಕ್ಷಕ ಮಂಜುನಾಥ್ ರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಭೂಪರಿವರ್ತನೆ ಮಾಡಲು ಆರ್ಐ ಮೂಲಕ 40 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿಂದೆ 10 ಸಾವಿರ ಹಣ ಪಡೆದಿದ್ದ ಸರ್ವೆ ಅಧಿಕಾರಿ, ಆರ್ಐ ಇಂದು ಉಳಿದ 30 ಸಾವಿರ ರೂ. ಹಣ ಪಡೆಯುವ ವೇಳೆ ಲೋಕಾಯುಕ್ತ ದಾಳಿ ಮಾಡಿದೆ. ಹೊಸಕೋಟೆ ಮೂಲದ ಮಹೇಶ್ ಎಂಬುವರ ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಲೇಔಟ್ ನಿರ್ಮಾಣಕ್ಕೆ ಪರ್ಮಿಷನ್ ಕೊಡಲು 14 ಲಕ್ಷ ರೂ. ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದ ಬಳ್ಳಾರಿ ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಪಾಲಿಕೆ ಇಂಜಿನಿಯರ್ ಮಹಾದೇವ, ಜೆಇ ವಿರುಪಾಕ್ಷ ಹಾಗೂ ಕೇಸ್ ವರ್ಕರ್ರಿಂದ ಹಣಕ್ಕೆ ಬೇಡಿಕೆ ಇಟ್ಟಿದರು