ಚಾಮರಾಜನಗರ : ಗಡಿ ಜಿಲ್ಲೆ ಚಾಮರಾಜನಗರದಾದ್ಯಂತ ಮಹಾಶಿವರಾತ್ರಿ ಸಂಭ್ರಮ ಜೋರಾಗಿತ್ತು. ಮಹಾಶಿವರಾತ್ರಿ ಪ್ರಯುಕ್ತ ಪವಾಡ ಪುರುಷ ಮಲೈಮಹದೇಶ್ವರಬೆಟ್ಟದಲ್ಲಿ ಐದು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಜಾತ್ರಾ ಮಹೋತ್ಸವಕ್ಕೆ ಭಕ್ತರ ದಂಡೇ ಹರಿದು ಬರ್ತಿದೆ.
ಮಹಾ ಶಿವರಾತ್ರಿ ಪ್ರಯುಕ್ತ ಸಿದ್ದೇಶ್ವರ ಉದ್ಭವ ಲಿಂಗಕ್ಕೆ ಫಲಪುಷ್ಪ ಅಲಂಕಾರ
ಇಂದು ಇಡೀ ರಾತ್ರಿ ಜಾಗರಣೆ ಮಾಡಲು ಭಕ್ತರ ಸಜ್ಜಾಗಿದ್ದು, ಜಾಗರಣೆ ಹಾಗೂ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಜರುಗಲು ಮಲೈಮಹದೇಶ್ವರಸ್ವಾಮಿ ಅಭಿವೃದ್ದಿ ಪ್ರಾಧಿಕಾರದಿಂದ ಸಕಲ ಸಿದ್ದತೆ ನಡೆಸಿದ್ದಾರೆ. ಮಾದಪ್ಪನ ದೇವಾಲಯ ವಿವಿಧ ಹೂವು ತರಕಾರಿಗಳಿಂದ ಸಿಂಗಾರಗೊಂಡಿದ್ದು, ವಿದ್ಯುತ್ ದೀಪಾಲಂಕರದಿಂದ ಕಂಗೊಳಿಸುತ್ತಿದೆ.