ಚಿಕ್ಕಬಳ್ಳಾಪುರ:- ಅತ್ತಿಗೆ ಬೆಡ್ ರೂಮ್ ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಮೈದುನ ಶರಣಾದ ಘಟನೆ ಚಿಕ್ಕಬಳ್ಳಾಪುರದ ಇಂದಿರಾ ನಗರದಲ್ಲಿ ಜರುಗಿದೆ.
35 ವರ್ಷದ ಆಂಜಿನಪ್ಪ ಮೃತ ರ್ದುದೈವಿ. ಗೃಹಿಣಿ ಆಶಾ ಎಂಬುವವರು ಒಂಟಿಯಾಗಿದ್ದ ವೇಳೆ ಆಂಜಿನಪ್ಪ ಬೆಡ್ರೂಮ್ಗೆ ನುಗ್ಗಿದ್ದಾನೆ. ಕೂಡಲೇ ಎಚ್ಚೆತ್ತ ಮಹಿಳೆ ಮೈದುನನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನೆಗೆ ಬಂದ ಮೈದುನ ರಾಘವೇಂದ್ರ ಎಂಬಾತ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಆಂಜಿನಪ್ಪನನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಹೋಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.