ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿಯವರ ದಕ್ಷ ಆಡಳಿತದಿಂದ ಜಗತ್ತಿನ ರಾಜಕಾರಣ ನಿರ್ಧರಿಸುವ ಶಕ್ತಿ ಭಾರತಕ್ಕೆ ದೊರೆತಿದೆ. ಈ ಮೂಲಕ ಮೋದಿ ಜಾಗತಿಕ ನಾಯಕರಾಗಿ ಹೊರ ಹೊಮ್ಮಿದ್ದಾರೆ. ನಿಮ್ಮ ಒಂದು ಮತ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ದೇಶವನ್ನು ಇನ್ನೂ ಬಲಿಷ್ಠಗೊಳಿಸಿ ವಿಶ್ವ ಗುರುವನ್ನಾಗಿಸುತ್ತದೆ’ ಎಂದರು. ಬಿಜೆಪಿ ಅಧಿಕಾರದ ಅವಧಿಯಲ್ಲಿ ಬಾಂಬ್ ಸಂಸ್ಕೃತಿ ಮರೆಯಾಗಿ ಜನತೆ ನೆಮ್ಮದಿಯಾಗಿ ಬದುಕುತ್ತಿದ್ದಾರೆ ಎಂದು ಮೈಸೂರು – ಕೊಡಗು ಸಂಸದ ಪ್ರತಾಪ ಸಿಂಹ ಹೇಳಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಮಾತನಾಡಿ, ’30 ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಕಾರ್ಯ ನಿರ್ವಹಿಸಿದ್ದೇನೆ. ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕನಾಗಿ, ಎರಡು ಬಾರಿ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇನೆ. ಪ್ರವಾಹ, ಕೋವಿಡ್ ಸಂದರ್ಭದಲ್ಲೂ ವಿಶೇಷ ಸೇವೆ ಸಲ್ಲಿಸಿದ್ದೇನೆ. ವಿರೋಧಿಗಳ ಹೇಳಿಕೆಗಳಿಗೆ ಮಹತ್ವ ನೀಡಬೇಡಿ. ದಿವಂಗತ ಸುರೇಶ ಅಂಗಡಿ ಅವರ ಯೋಜನೆಗಳನ್ನು ಕಾರ್ಯಗತ ಮಾಡಲು ನನಗೆ ಅವಕಾಶ ನೀಡಿ’ ಎಂದು ಜಗದೀಶ್ ಶೆಟ್ಟರ್ ಮತದಾರರಿಗೆ ವಿನಂತಿ ಮಾಡಿಕೊಂಡರು.