ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banarjee) ಅವರು ಕೋಲ್ಕತ್ತಾಗೆ ತೆರಳುತ್ತಿದ್ದ ವೇಳೆ (Car accident) ಕಾರು ಅಪಘಾತಕ್ಕೀಡಾಗಿದ್ದು, ಅವರ ತಲೆಗೆ ಗಂಭೀರ ಗಾಯವಾಗಿದೆ. ಹೌದು ಬುರ್ದ್ವಾನ್ನಿಂದ ಕೋಲ್ಕತ್ತಾಗೆ ರಸ್ತೆ ಮಾರ್ಗವಾಗಿ ಹಿಂತಿರುಗುತ್ತಿದ್ದ ವೇಳೆ ಮುಖ್ಯಮಂತ್ರಿ ಬೆಂಗಾವಲು ಪಡೆಯ ಮುಂದೆ ಮತ್ತೊಂದು ಕಾರು ಬಂದಿದ್ದರಿಂದ ತಕ್ಷಣವೇ ಬ್ರೇಕ್ ಹಾಕಿದ್ದರಿಂದ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ..
Health Tips: ಕಡಲೆಕಾಯಿ ಆರೋಗ್ಯಕ್ಕೆ ಉತ್ತಮ.! ಆದ್ರೆ ಈ ಸಮಸ್ಯೆ ಇರುವವರು ತಿಂದರೆ ಅಪಾಯ ತಪ್ಪಿದ್ದಲ್ಲ
ಮೂಲಗಳ ಪ್ರಕಾರ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ʼನಲ್ಲಿ ತೆರಳಲು ಆಗಲಿಲ್ಲ. ಆದ್ದರಿಂದ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಮಂಜು ಕವಿದ ವಾತಾವರಣದಲ್ಲಿ ಕಡಿಮೆ ಗೋಚರತೆಯಿಂದಾಗಿ ಚಾಲಕನು ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಮಮತಾ ಬ್ಯಾನರ್ಜಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ ಎಂದು ಮೂಲಕಗಳು ತಿಳಿಸಿವೆ.