ಕೋಲ್ಕತ್ತಾ: ಹೈಕೋರ್ಟ್ನ (Calcutta High Court) ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ನ್ಯಾ.ಅಭಿಜಿತ್ ಗಂಗೋಪಾಧ್ಯಾಯ (Abhijit Gangopadhyay) ಅವರು ಭಾರತೀಯ ಜನತಾ ಪಾರ್ಟಿ (BJP) ಸೇರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
BJP Candidates List: ದ್ವೇಷ ಭಾಷಣದ 3 ನಾಯಕರಿಗೆ ಗೇಟ್ʼಪಾಸ್: ಮೊದಲ ಪಟ್ಟಿಯಲ್ಲಿ ಬಿಜೆಪಿ ಕಠಿಣ ಸಂದೇಶ
ಅವರು ತಮ್ಮ ಸಾಲ್ಟ್ ಲೇಕ್ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ, ಮಾರ್ಚ್ 7 ರಂದು ಬಿಜೆಪಿ ಸೇರುವ ಸಾಧ್ಯತೆಯಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha elections) ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ತೃಣಮೂಲ ಕಾಂಗ್ರೆಸ್ನ (TMC) ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಬಿಜೆಪಿಯಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಆಡಳಿತ ಪಕ್ಷದ ಲೇವಡಿಯಿಂದ ನಾನು ಈ ಕ್ರಮಕ್ಕೆ ಮುಂದಾಗಿದ್ದೇನೆ. ಅವರ ಅಪಹಾಸ್ಯ ಮತ್ತು ಹೇಳಿಕೆಗಳು ನನ್ನನ್ನು ಈ ಹೆಜ್ಜೆ ಇಡಲು ಪ್ರೇರೇಪಿಸಿತು. ಆಡಳಿತ ಪಕ್ಷ ನನ್ನನ್ನು ಹಲವು ಬಾರಿ ಅವಮಾನಿಸಿದೆ. ಅವರ ವಕ್ತಾರರು ನನ್ನ ಮೇಲೆ ಅಸಂಸದೀಯ ಪದಗಳಿಂದ ದಾಳಿ ನಡೆಸಿದ್ದಾರೆ. ಅವರಿಗೆ ಶಿಕ್ಷಣದ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.