ಮಂಡ್ಯ : ಕೆಎಸ್ ಆರ್ಟಿಸಿ ಬಸ್ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ವ್ಯಕ್ತಿಯ ಆತ್ಮಹತ್ಯೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಘಟನೆ ನಡೆದಿದೆ.
ಕಳೆದ ಬುಧವಾರ ಸಂಜೆ ಈ ಘಟನೆ ನಡೆದಿದ್ದು, ತೂಬಿನಕೆರೆ ನಿವಾಸಿ ಅರುಣ್(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೆಎಸ್ ಆರ್ಟಿಸಿ ಬಸ್ ಕೆಸ್ತೂರು ಗ್ರಾಮಕ್ಕೆ ತೆರಳುತ್ತಿತ್ತು. ಇದೇ ವೇಳೆ ರಸ್ತೆ ವಿಭಜಕದ ಮೇಲೆ ಕುಳಿತ್ತಿದ್ದ ವ್ಯಕ್ತಿ ಬಸ್ ನಿಲ್ದಾಣದಿಂದ ಬರುತ್ತಿದ್ದಂತೆ ಏಕಾಏಕಿ ಹಿಂಬದಿ ಚಕ್ರಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಈ ಸಂಬಂಧ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.