ಬೆಂಗಳೂರು: ನೇರಳೆ ಮಾರ್ಗದ ಮೆಟ್ರೋ ಟ್ರ್ಯಾಕ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 2.20ಕ್ಕೆ ನಡೆದಿದೆ.ಬಿಹಾರ ಮೂಲದ ಸಿದ್ದಾರ್ಥ್ (30) ಎಂಬಾತ ಏಕಾಏಕಿ ಟ್ರ್ಯಾಕ್ ಮೇಲೆ ಹಾರಿದ್ದಾರೆ. ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.
ಯುವಕನನ್ನು ಬಿಹಾರ (Bihar) ಮೂಲದ 20 ವರ್ಷದ ಶ್ರೀ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ಇಂದು (ಸೆ.17) ಮಧ್ಯಾಹ್ನ 2:15ರ ಸುಮಾರಿಗೆ ಈ ದುರಂತ ಸಂಭವಿಸಿದೆ.
ಬರುತ್ತಿದ್ದ ಮೆಟ್ರೋ ರೈಲಿನ ಟ್ರ್ಯಾಕ್ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ (ETS) ನಿರ್ವಹಿಸಿ, ಸ್ಟೇಷನ್ ಕಂಟ್ರೋಲರ್ ತಂಡದಿಂದ ಯುವಕನನ್ನು ರಕ್ಷಣೆ ಮಾಡಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ ಯುವಕ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಸದ್ಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಅಧಿಕಾರಿಗಳ ವಶದಲ್ಲಿರುವ ಯುವಕನಿಂದ ಮಾಹಿತಿ ಪಡೆಯುತ್ತಿದ್ದು, ವಿಚಾರಣೆ ನಡೆಯುತ್ತಿದೆ.