BREAKING: ಮಂಡ್ಯದ ರೆಬಲ್‌ ಲೇಡಿ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ!

ಬೆಂಗಳೂರು: ಮಂಡ್ಯ ಜಿಲ್ಲೆಯ ಸ್ವಾಭಿಮಾನಿ ಸಂಸದೆ ಸುಮಲತಾ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.  ಇಂದು ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಎಸ್‌ವೈ, ವಿಜಯೇಂದ್ರ ನೇತೃತ್ವದಲ್ಲಿ ಅಧಿಕೃತವಾಗಿ ಅವರು ಕಮಲ ಪಡೆ ಸೇರಿದ್ದರು.   ಬೆಂಗಳೂರಲ್ಲಿ ಶುರುವಾಯ್ತು ಕಾಲರಾ ರೋಗದ ಆತಂಕ: ಕಟ್ಟೆಚ್ಚರ ವಹಿಸಿದ ಆರೋಗ್ಯ ಇಲಾಖೆ! ಸುಮಲತಾಗೆ ರಾಕ್‌ಲೈನ್ ವೆಂಕಟೇಶ್‌, ಪುತ್ರ ಅಭಿಷೇಕ್ ಸಾಥ್ ನೀಡಿದ್ದಾರೆ. ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಸಂಸದ ಡಿ.ವಿ.ಸದಾನಂದಗೌಡ, ಶಾಸಕ ಮುನಿರತ್ನ ಸಿ.ಟಿ.ರವಿ, ವಿಪಕ್ಷ ನಾಯಕ ಆರ್.ಅಶೋಕ್‌ ಉಪಸ್ಥಿತಿರಿದ್ದರು