ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ (Mandya Lok Sabha Election) ಹೆಚ್ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧೆ ಮಾಡುವುದು ಬಹುತೇಕ ಅಂತಿಮವಾಗಿದ್ದು ಅಧಿಕೃತ ಘೋಷಣೆ ಬಾಕಿಯಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಇಂದು ಸಂಜೆ ಮಂಡ್ಯ ಭಾಗದ ಜೆಡಿಎಸ್ (JDS) ನಾಯಕರ ಸಭೆಯನ್ನು ಕರೆಯುತ್ತೇನೆ. ಈ ಸಭೆಯ ಬಳಿಕ ಅಂತಿಮವಾಗಿ ಅಭ್ಯರ್ಥಿಯ ಹೆಸರನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಜೆಡಿಎಸ್ನ ಹೃದಯ ಭಾಗ ಮಂಡ್ಯ. ಕಳೆದ ಚುನಾವಣೆ ನಮಗೆ ನೈತಿಕ ಸೋಲು ಅಲ್ಲ. ಈ ಚುನಾವಣೆ ಮೂಲಕ ಜೆಡಿಎಸ್ ಮುಗಿಸುತ್ತೇವೆ ಎನ್ನುವ ದುರಹಂಕಾರದ ಮಾತಿಗೆ ಚುನಾವಣೆಯಲ್ಲಿ ಉತ್ತರ ಕೊಡುತ್ತೇವೆ ಎಂದರು.
Shivaraj Thangadagi: ಪ್ರಚೋದನಕಾರಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಸಚಿವ ಶಿವರಾಜ್ ತಂಗಡಗಿ !
ಬದುಕಿರುವರೆಗೂ ನಾವು ರಾಮನಗರ ಜಿಲ್ಲೆಯ ಅಭಿವೃದ್ಧಿ ಕೈ ಬಿಡುವುದಿಲ್ಲ. ರಾಮನಗರ, ಚನ್ನಪಟ್ಟಣ ಜನತೆಗೆ ಮನವಿ ಮಾಡುತ್ತೇನೆ. ಈ ಪಕ್ಷ ಉಳಿಸಲು 3 ಬಾರಿ ಹೃದಯ ಚಿಕಿತ್ಸೆ, ಎರಡು ಬಾರಿ ಮೆದುಳು ಚಿಕಿತ್ಸೆ ನಡೆದಿದೆ. ಇಷ್ಟು ಆದರೂ ಬದುಕಿದರೆ ನಾಡಿಗೆ ಏನೋ ಸೇವೆ ಬೇಕು ಅಂತ ದೇವರು ಬದುಕಿಸಿದ್ದಾನೆ. ಈ ಪಕ್ಷ ಉಳಿಸೋದು ನಿಮ್ಮ ಕೈಯಲ್ಲಿ ಇದೆ. ಇದು ರೈತರ ಪಕ್ಷ ಎಂದು ಹೇಳಿದರು.