ಮಂಡ್ಯ:- ಹಾಡು ಹಗಲೇ ಮನೆಗೆ ನುಗ್ಗಿ ಮಹಿಳೆಯನ್ನ ಹೆದರಿಸಿ ಕಳ್ಳತನ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮೆಳ್ಳಹಳ್ಳಿಯಲ್ಲಿ ನಡೆದಿದೆ.
ಹರ್ಷಿತಾ ಎಂಬಾಕೆ ಮನೆಯಲ್ಲಿ ಒಬ್ಬರೇ ಇದ್ದುದ್ದನ್ನ ಗಮನಿಸಿದ ಇಬ್ಬರು ಮುಸುಕುದಾರಿಗಳು ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಹೆಸರಿಸಿದ್ದಾರೆ.
ಬಳಿಕ ಬೀರುವಿನಲ್ಲಿದ್ದ ಸುಮಾರು 25ಗ್ರಾಂ ಚಿನ್ನಾಭರಣ ಹಾಗೂ 1.60ಲಕ್ಷ ನಗದ ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಕೃಷ್ಣಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಪಿಎಸ್ಐ ಪುಟ್ಟಮಾದು ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಕೆ.ಎಂ.ದೊಡ್ಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.