ಬೆಳಗಾವಿ:- ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇಡಬೇಕು. ಅವರ ಆಟ ಆಡುತ್ತಿದ್ದಾರೆ. ಮನೆಯಲ್ಲಿ ಇದ್ದಾರೆ ಅಂತ ನಿರ್ಲಕ್ಷ್ಯ ಬೇಡ. ಕಳ್ಳರು ಮನೆಗೆ ಬರುತ್ತಿದ್ದಾರೆ ಹುಷಾರ್.
ಎಸ್ ವೀಕ್ಷಕರೇ, ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಖದೀಮರು ಕಿಡ್ನ್ಯಾಪ್ ಮಾಡಿರುವಂತಹ ಘಟನೆ ಜಿಲ್ಲೆಯ ಅಥಣಿಯ ಸ್ವಾಮಿ ಫ್ಲಾಟ್ನಲ್ಲಿ ಜರುಗಿದೆ.
ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ವಿಜಯ್ ದಂಪತಿಯ ಮಕ್ಕಳಾದ ಸ್ವಸ್ತಿ ದೇಸಾಯಿ, ವಿಯೋಮ್ ದೇಸಾಯಿ ಅನ್ನು ಅಪಹರಿಸಿದ್ದಾರೆ.
ಇಬ್ಬರು ಮಕ್ಕಳು ಎಲ್ಕೆಜಿ ಶಾಲೆಗೆ ಹೋಗಿ ಮನೆಗೆ ಬಂದಿದ್ದರು. ಮನೆಯಲ್ಲಿ ಅಜ್ಜಿ ಮಾತ್ರ ಇರೋದನ್ನ ಗಮನಿಸಿದ ಖದೀಮರು ಕೃತ್ಯವೆಸಗಿದ್ದಾರೆ. ಮಕ್ಕಳನ್ನು ಅಪಹರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.