ಬಳ್ಳಾರಿ:- ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳು ಕೋರ್ಟ್ಗೆ ಹಾಜರಾಗಿದ್ದರು. ಸೆಪ್ಟೆಂಬರ್ 17ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಆದ ಹಿನ್ನೆಲೆಯನ್ನು ದರ್ಶನ್ ತಲೆ ಮೇಲೆ ಕೈಹೊತ್ತು ಕೂತಿದ್ದಾರೆ.
ದರ್ಶನ್ಗೆ ಚಡಪಡಿಕೆ ಹೆಚ್ಚಾಗಿದೆ. ಬಳ್ಳಾರಿ ಸೆಂಟ್ರಲ್ ಜೈಲಿನ ಕಟ್ಟುನಿಟ್ಟಿನ ವಾತಾವರಣಕ್ಕೆ ಅವರು ಸೊರಗಿದ್ದಾರೆ. ಜೈಲಿನ ಇನ್ಸೈಡ್ ಮಾಹಿತಿ ಪ್ರಕಾರ, ಇಂದು ಅವರು ಊಟ ಸೇವಿಸಿಲ್ಲ. ಜೈಲಿನ ಮೆನು ಪ್ರಕಾರ ಇಂದು ದರ್ಶನ್ಗೆ ಮಟನ್ ಊಟ ನೀಡಲಾಯಿತು. ಜಾಮೀನು ಸಿಗದೇ ಟೆನ್ಷನ್ ಆಗಿರುವ ದರ್ಶನ್ ಮಟನ್ ಊಟ ಸೇವಿಸಿಲ್ಲ. ಜಾಮೀನು ಅರ್ಜಿ ಸಲ್ಲಿಕೆ ವಿಚಾರವಾಗಿ ವಕೀಲರ ಜೊತೆ ಅವರು ಚರ್ಚೆ ಮಾಡಿದ್ದಾರೆ.
ಹೈಸೆಕ್ಯೂರಿಟಿ ಸೆಲ್ನಲ್ಲಿ ದರ್ಶನ್ ಚಡಪಡಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮುಗಿಯುತ್ತಿದ್ದಂತೆಯೇ ಸೆಲ್ನಲ್ಲಿ ಅತ್ತಿಂದಿತ್ತ ದರ್ಶನ್ ಓಡಾಡಿದ್ದಾರೆ. ಹೈಪ್ರೊಫೈಲ್ ಕೇಸ್ ಆದ್ದರಿಂದ ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಕೂಲಂಕಶವಾಗಿ ಮಾಡಿದ್ದಾರೆ. 3991 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇತ್ತೀಚೆಗೆ ಹೇಳಿಕೆ ನೀಡಿದ್ದ ದರ್ಶನ್ ಪರ ವಕೀಲರು, ‘ಜಾಮೀನು ಅರ್ಜಿ ಸಲ್ಲಿಸಲು ಇನ್ನೂ ಸಮಯವಿದೆ’ ಎಂದು ಹೇಳಿದ್ದರು.