ಮೈಸೂರು: ಸಂಸತ್ನಲ್ಲಿ ಸ್ಮೋಕ್ ಬಾಂಬ್ (Security Breach in LokSabha) ಎಸೆದಿದ್ದ ಮನೋರಂಜನ್ ಮೈಸೂರು ಮೂಲದವನಾಗಿದ್ದು, ಪುಸ್ತಕಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದನಂತೆ. ಹಾಗಾದ್ರೆ ಈತನಿಗೆ ಪಾಸ್ ಸಿಕ್ಕಿದ್ದೇಗೆ, ಏನನ್ನೂ ಪರಿಶೀಲನೆ ಮಾಡದೇ ಹಾಗೆ ಪಾಸ್ ವಿತರಣೆ ಮಾಡಿದ್ರಾ..? ಮನೋರಂಜನ್ ಅಪ್ಪ ಏನಂತಾರೆ ಅನ್ನೋದ್ರ ವರದಿ ಇಲ್ಲಿದೆ.
ಸಂಸತ್ನಲ್ಲಿ ಹಲ್ಚಲ್ ಎಬ್ಬಿಸಿದವರಲ್ಲಿ ಓರ್ವ ಮನೋರಂಜನ್. ಈತ ಮೈಸೂರಿನಲ್ಲಿ ವಾಸವಿದ್ದು, ಮೂಲತಃ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಲ್ಲಾಪುರ ಗ್ರಾಮದವನು. ಶಿಕ್ಷಣಕ್ಕಾಗಿಯೇ ಕುಟುಂಬಸ್ಥರು ಮೈಸೂರು ಸೇರಿದರು. ಮೈಸೂರಿನ ಮರಿಮಲ್ಲಪ್ಪದಲ್ಲಿ ಹೈಸ್ಕೂಲ್ ಓದಿದ್ದು, ಸೇಂಟ್ ಜೋಸೆಫ್ನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದಾನೆ. ಬೆಂಗಳೂರಿನ ಬಿಐಟಿಯಲ್ಲಿ ಕಂಪ್ಯೂಟರ್ ಸೈನ್ಸ್ನಲ್ಲಿ ಎಂಜಿನಿಯರಿಂಗ್ ಮುಗಿಸಿದ್ದ ಮನೋರಂಜನ್,
Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ
2016ರಲ್ಲಿ ಕಾಂಬೋಡಿಯಾಗೆ ತೆರಳಿದ್ದ. ಲೋಕಸಭಾ ಕಲಾಪಕ್ಕೆ ನುಗ್ಗಿದ್ದ ಮೈಸೂರಿನ ಮನೋರಂಜನ್, ಕ್ರಾಂತಿಕಾರಿ ಪುಸ್ತಕಗಳ ಪ್ರೇಮಿಯಾಗಿದ್ದನಂತೆ. ಮೈಸೂರಿನ ಮನೋರಂಜನ್ ಮನೆಯಲ್ಲಿ ಹಲವಾರು ಐತಿಹಾಸಿಕ ಪುಸ್ತಕ ಪತ್ತೆಯಾಗಿವೆ. ಸುಭಾಶ್ ಚಂದ್ರ ಬೋಸ್, ಸ್ವಾತಿ ಚರ್ತುವೇದಿ, ಅಂಬಾನಿಯ ಐತಿಹಾಸಿಕ ಕ್ರಾಂತಿಕಾರಿ ಪುಸ್ತಕಗಳು ಲಭ್ಯವಾಗಿವೆ.