ನಟಿ ಮಾನ್ವಿತಾ ಕಾಮತ್ ತಾಯಿ ಮೆಚ್ಚಿದ ಹುಡುಗನೊಂದಿಗೆ ಇಂದು ಚಿಕ್ಕಮಗಳೂರಿನ ಕಳಸದಲ್ಲಿ ಸಪ್ತಪದಿ ತುಳಿದಿದ್ದಾರೆ. ಮೈಸೂರು ಹುಡುಗ ಅರುಣ್ ಕುಮಾರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಎರಡು ಕುಟುಂಬದ ಸದಸ್ಯರು ಮತ್ತು ಸಿನಿಮಾ ರಂಗದ ಗಣ್ಯರು ಹಾಗೂ ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಮೇ 1ರಂದು ಮಾನ್ವಿತಾ ಮದುವೆ ಕೊಂಕಣಿ ಸಂಪ್ರದಾಯದಂತೆ ನಡೆದಿದೆ, ಅದಕ್ಕೂ ಮುನ್ನ ಏಪ್ರಿಲ್ 29ರಂದು ಮೆಹೆಂದಿ ಹಾಗೂ 30ರಂದು ಸಂಗೀತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದುನಿಯಾ ಸೂರಿ ನಿರ್ದೇಶನದ ಸೂಪರ್ಹಿಟ್ ಚಿತ್ರ ‘ಕೆಂಡಸಂಪಿಗೆ’ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸಿದ ನಟಿ ಮಾನ್ವಿತಾ ಕಾಮತ್ ನಂತರ ಹಲವು ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿದ್ದರು. ಶಿವರಾಜ್ಕುಮಾರ್ ನಟನೆಯ ‘ಟಗರು’ ಸಿನಿಮಾ ಅವರಿಗೆ ಮತ್ತಷ್ಟು ಹೆಸರು ತಂದುಕೊಟ್ಟಿತ್ತು.
![Demo](https://ainlivenews.com/wp-content/uploads/2023/12/spoorthi-1.jpg)
ಮಾನ್ವಿತಾ ಕಾಮತ್ ಹಾಗೂ ಅರುಣ್ ಮದುವೆ ಕೊಂಕಣಿ ಸಂಪ್ರದಾಯದಂತೆ ನಡೆದಿದೆ. ನಿನ್ನೆ ನವಜೋಡಿಯ ಅರಿಶಿನ ಶಾಸ್ತ್ರ, ಮೆಹಂದಿ ಮತ್ತು ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ. ಚಿಕ್ಕಮಗಳೂರಿನ ಕಳಸದಲ್ಲಿ ಮದುವೆಯ ಶಾಸ್ತ್ರಗಳು ನಡೆಯುತ್ತಿವೆ. ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನವಜೋಡಿ ನೇರಳೆ ಬಣ್ಣದ ಧಿರಿಸಿನಲ್ಲಿ ಮಿಂಚಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)