ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆಯ ಹೆಸರಿನಲ್ಲಿ ಹಲವರಿಗೆ ಎಸ್ಐಟಿಯಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಸ್ಐಟಿ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಪಾತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಕ್ಷಿ ಕೇಳುತ್ತಿದ್ದಾರೆ.
ದೇವರಾಜೇಗೌಡ, ಶಿವರಾಮೇಗೌಡ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಂಭಾಷಣೆ ಮಾಧ್ಯಮಗಳಿಗೆ ಬಿಡುಗಡೆ ಆಗಿತ್ತು. ಅದರಲ್ಲಿ ಏನಿದೆ? ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ.. ಅರ್ಧ ನಿಮಿಷ ಮಾತನಾಡಿದ್ದೆ ಅಂತ ಹೇಳ್ತಾರೆ. ಯಾರಾರೋ ಬರ್ತಿರುತ್ತಾರೆ. ಅದರಲ್ಲಿ ಕೆಟ್ಟವರು ಬರ್ತಾರೆ, ಒಳ್ಳೆಯವರೂ ಇರ್ತಾರೆ ಎಂದು ಹೇಳಿದ್ದಾರೆ. ಆದರೆ, ಅರ್ಧ ನಿಮಿಷ ಮಾತನಾಡಿರುವುದು ಪ್ರಮುಖವಾದ ಅಂಶ ಅಲ್ವಾ? ಎಂದು ಪ್ರಶ್ನಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
Black radish: ಕಪ್ಪು ಮೂಲಂಗಿ ಬೆಳೆಯುವುದು ಹೇಗೆ..? ಇದರ ಉಪಯೋಗವೇನು..?
ಸಾಕ್ಷಿ ಕೊಡಿ ಸಾಕ್ಷಿ ಕೊಡಿ ಅಂತ ಹೇಳ್ತಾರೆ.. ಇವತ್ತು SIT ಅವರು 7 ಜನರನ್ನ ಬಂಧನ ಮಾಡಿ ಕರೆ ತಂದಿದ್ದಾರೆ ಅಲ್ವಾ? ಯಾವ ಸಾಕ್ಷಿ ಮೇಲೆ ಬಂಧನ ಮಾಡಿ ಕರೆ ತಂದಿದ್ದಾರೆ? ಹಲವಾರು ಜನರನ್ನ ಪ್ರತಿ ನಿತ್ಯ ಕರೆದು ಏನು ಕಿರುಕುಳ ಮಾಡ್ತಿದ್ದಾರೆ SIT ಅವರು.
ಅವರಿಗೂ ಇವರಿಗೂ ಈ ಒಂದು ಪ್ರಕರಣಕ್ಕೆ ಏನು ಸಂಬಂಧ ಇದೆ ಎಂದು ಪ್ರಶ್ನಿಸಿದರು. ಇಲ್ಲಿ ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದಂತೆ ಇದೆ. ಮಾಹಿತಿ ಏನು ಇದೆ ಅಂತ ಕೊಡಿ ಅಂತ ಹೇಳ್ತಾರೆ ಡಿಕೆಶಿ. ದೂರನ್ನು ಬಹಳ ಕಷ್ಟ ಪಟ್ಟು ಕೊಡಿಸಿದ್ದೇವೆ ಅಂತ ಹೇಳ್ತಾರೆ. ಅ ವ್ಯಕ್ತಿ ಜೊತೆ ಮಾತನಾಡಬೇಕಾದ್ರೆ ಕಷ್ಟ ಪಟ್ಟು ಕೊಡಿಸಿದ್ದೇವೆ ಅಂತ ಹೇಳ್ತಾರೆ. ಇದಕ್ಕಿಂತಲೂ ಸಿಎಂ ಅವರಿಗೆ ಸಾಕ್ಷಿ ಬೇಕಾ? ಎಂದು ಪ್ರಶ್ನಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)