ಚಿಕ್ಕಮಗಳೂರು : ರಾಜ್ಯದಲ್ಲಿ ವಿಕ್ರಂ ಗೌಡ ಎನ್ ಕೌಂಟರ್ ವೇಳೆ ತಪ್ಪಿಸಿಕೊಂಡಿದ್ದ ಮಾವೋವಾದಿ ಕೋಟೆ ಹೊಂಡ ರವಿ ಅಧಿಕಾರಿಗಳ ಮುಂದೆ ಶರಣಾಗಿದ್ದು, ಈ ಮೂಲಕ ರಾಜ್ಯ ನಕ್ಸಲ್ ಮುಕ್ತವಾಗಿದೆ.
ಇತ್ತೀಚೆಗಷ್ಟೇ ಆರು ಮಂದಿ ನಕ್ಸಲರ ತಂಡ ಪೊಲೀಸರ ಎದುರು ಶರಣಾಗಿದ್ದರು. ಇವರ ತಂಡದಲ್ಲೇ ಇದ್ದ ಕೋಟೆ ಹೊಂಡ ರವಿ ವಿಕ್ರಂ ಗೌಡ ಅವರ ಎನ್ಕೌಂಟರ್ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಇದೀಗ ನಕ್ಸಲ್ ಕೋಟೆ ಹೊಂಡ ರವಿ ಪೊಲೀಸರ ಎದುರು ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ ನಾಲ್ಕು ಕಿಲೋಮೀಟರ್ ದೂರದಲ್ಲಿರುವ ನೆಮ್ಮಾರ್ ಫಾರೆಸ್ಟ್ ಐಬಿಯಲ್ಲಿ ನಕ್ಸಲ್ ಕೋಟೆಹೊಂಡ ರವಿ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಶರಣಾಗತಿ ಪ್ರಕ್ರಿಯೆ ಪೂರ್ಣಗೊಳಿಸಲು ರವಿಯನ್ನು ಚಿಕ್ಕಮಗಳೂರಿಗೆ ಕರೆತರಲಾಗುತ್ತಿದೆ. ಇದಲ್ಲದೇ ಸುಮಾರು ವರ್ಷಗಳಿಂದ ತಲೆಮರೆಸಿಕೊಂಡಿರುವ ಭೂಗತ ನಕ್ಸಲ್ ತೊಂಬಟ್ಟು ಲಕ್ಷ್ಮಿ ಸಹ ಫೆ.2ರಂದು ಶರಣಾಗಲಿದ್ದಾರೆ.
ಜಿಮ್ಸ್ ಆಸ್ಪತ್ರೆಯಲ್ಲಿ 10 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕ
ರಾಜ್ಯವನ್ನು ನಕ್ಸಲ್ ಮುಕ್ತಗೊಳಿಸಲು ಅವಿರತ ಪ್ರಯತ್ನ ನಡೆಸಿದ 22 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕವನ್ನು ಘೋಷಿಸಿಲಾಗಿದೆ..ಕಳೆದ ಜನವರಿ 8 ರಂದು, ಕೆಲವು ಮಾವೋವಾದಿಗಳು ಶರಣಾದಾಗ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನಲ್ಲಿ ಗುಲಾಬಿ ಮತ್ತು ಸಂವಿಧಾನದ ಪ್ರತಿಗಳನ್ನು ನೀಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ಸ್ವಾಗತಿಸಿದರು.