ತುಮಕೂರು:-ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ಪತ್ತೆಯಾಗಿದೆ. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ.
17ನೇ ವಾರ್ಡ್ ನ ಸರಸ್ವತಿಪುರಂ 5 ಕ್ರಾಸ್ ನಲ್ಲಿರುವ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆಯಲಾಗಿತ್ತು. ಗಿಡದಲ್ಲಿ ಗಾಂಜಾ ಸೊಪ್ಪು ಕಿತ್ತುಕೊಂಡು ಹುಡುಗರು ಹೋಗುತ್ತಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
ಸ್ಥಳೀಯರ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಭೇಟಿ ಕೊಟ್ಟು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ನಿವೇಶನದ ಮಾಲೀಕನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದು, ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)