ಬೆಳಗಾವಿ:- ಭ್ರೂಣ ಹತ್ಯೆ ತಡೆಗೆ ಕಾರ್ಯ ಪಡೆ ರಚನೆ ಮಾಡಲಾಗುತ್ತಿದ್ದು, 3 ತಿಂಗಳಿಗೊಮ್ಮೆ ಸ್ಕ್ಯಾನಿಂಗ್ ಸೆಂಟರ್ ತಪಾಸಣೆ ಮಾಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಸಚಿವರು ಸದನಕ್ಕೆ ಮಾಹಿತಿ ನೀಡಿ, ರಾಜ್ಯದಲ್ಲಿ 6,395 ಸ್ಕ್ಯಾನಿಂಗ್ ಸೆಂಟರ್ ನೋಂದಣಿಯಾಗಿದ್ದು, ಅದರಲ್ಲಿ 6068 ಖಾಸಗಿ, 327 ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿವೆ. ಬಾಲಿಕಾ ಸಾಫ್ಟ್್ಟೇರ್ ಮೂಲಕ ನೋಂದಣಿ ಕಡ್ಡಾಯಗೊಳಿಸಲಾಗುತ್ತಿದೆ. ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆ ಅಡಿ ಎಲ್ಲ ಶಾಸನಬದ್ಧ ಸಮಿತಿಗಳು ರಾಜ್ಯ, ಜಿಲ್ಲಾ ಮಟ್ಟದಲ್ಲಿ ರಚನೆಗೊಂಡಿವೆ. ಈ ಸಮಿತಿಗಳು ಪ್ರತಿ 3 ತಿಂಗಳಿಗೊಮ್ಮೆ ಸ್ಕಾಯನಿಂಗ್ ಸೆಂಟರ್ ತಪಾಸಣೆ ನಡೆಸಲಿವೆ. ಇಲ್ಲಿಯವರೆಗೆ 4,408 ಸ್ಕಾಯನಿಂಗ್ ಸೆಂಟರ್ಗಳನ್ನು ತಪಾಸಣೆ ನಡೆಸಲಾಗಿದೆ. ಈ ವೇಳೆ ಸಾಕಷ್ಟು ಪ್ರಮಾಣದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿರುವುದು ಬೆಳಕಿಗೆ ಬಂದಿದು, 100 ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 24 ಪ್ರಕರಣಗಳನ್ನು ದಂಡ ವಿಧಿಸಿ ಖುಲಾಸೆಗೊಳಿಸಲಾಗಿದೆ ಎಂದರು.
50ಸಾವಿರ ರೂ. ಬಹುಮಾನ: ರಾಜ್ಯದ ಯಾವುದೇ ಭಾಗದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂಥ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ವೈದ್ಯರು, ದಲ್ಲಾಳಿಗಳು, ಗರ್ಭಿಣಿಯರು ಹಾಗೂ ಸಂಬಂಧಿಕರ ವಿರುದ್ಧ ಮಾಹಿತಿ ನೀಡುವವರಿಗೆ 50 ಸಾವಿರ ರೂ. ಬಹುಮಾನ ನೀಡಲಾಗುತ್ತಿದೆ ಎಂದರು.