ಹುಬ್ಬಳ್ಳಿ:- ಮೇ 1 ರಂದು ಹುಬ್ಬಳ್ಳಿಯ ನೇಹಾ ಮನೆಗೆ ಅಮಿತ್ ಶಾ ಭೇಟಿ ಕೊಡಲಿದ್ದಾರೆ ಎಂದು ಮುರಗೇಶ್ ನಿರಾಣಿ ಹೇಳಿದ್ದಾರೆ.
ನೇಹಾ ಹತ್ಯೆ ಕೇಸ್ ಮಾಸೋ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್..!
ಈ ಸಂಬಂಧ ಮಾತನಾಡಿದ ಅವರು,ನೇಹಾ ಹತ್ಯೆಯನ್ನು ನಾನು ಖಂಡಿಸಿಸುತ್ತೇನೆ. ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಹೇಗೆ ಎನ್ನುವುದನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೆಯೇ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ ಕುಟುಂಬಕ್ಕೆ ಎಷ್ಟು ನೋವು ಆಗಿರಬೇಕು. ಹತ್ಯೆ ಮಾಡಿರುವ ಯುವಕ ಬಗ್ಗೆ ತನಿಖೆ ಮಾಡುತ್ತಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕಬೇಕು. ಆತನ ಹಿಂದೆ ಯಾರು ಇದ್ದಾರೆ ಯಾರ ಕೈವಾಡವಿದೆ ಅನ್ನೋದನ್ನ ತನಿಖೆ ನಡೆಸಬೇಕು. ಹತ್ಯೆಗೆ ಯಾರು ಪ್ರೇರಣೆ ಕೊಟ್ಟಿದ್ದಾರೆ ಅವರಿಗೂ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಕಾಲೇಜ್ ಕ್ಯಾಂಪಸ್ ಒಳಗೆ ಇಂತಹ ಘಟನೆಗಳು ಮುಂದೆ ಆಗಬಾರದು ಅದಕ್ಕೆ ಸ್ಪೆಷಲ್ ಆ್ಯಕ್ಟ್ ತರಬೇಕು. ಆವಾಗ ಇಂತಹ ಘಟನೆಗಳಿಗೆ ಕಡಿವಾಣ ಹಾಕಬಹುದು. ನಿರಂಜನ ಅವರು ಕಾಂಗ್ರೆಸ್ ಕಾರ್ಪೊರೇಟರ್ ಇದ್ದಾರೆ. ಅವರಿಗೆ ನಾವು ಸಾಂತ್ವನ ಹೇಳೋದು ಹೇಗೆ ರಾಜಕಾರಣ ಆಗುತ್ತೆ. ಇಂತಹ ಘಟನೆಗಳು ನಡೆದಾಗ ಎಲ್ಲರೂ ಬಂದು ಸಾಂತ್ವನ ಹೇಳುತ್ತಾರೆ ಆದರೆ ಇದನ್ನ ಕಾಂಗ್ರೆಸ್ ರಾಜಕಾರಣ ಅಂತ ಶಬ್ದ ಬಳಸಬಾರದು. ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ ಎಂದಿದ್ದಾರೆ