ಬೆಂಗಳೂರು:– ರಾಜ್ಯದಲ್ಲಿ ಮೊದಲ ಹಂತದ ಮತದಾನ ಯಶಸ್ವಿಯಾಗಿ ನಡೆದ ಬೆನ್ನಲ್ಲೇ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ನಡೆಸಲಾಗಿದೆ. ಕರ್ನಾಟಕ ಸೇರಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾರರು ಮತ ಚಲಾಯಿಸಲಿದ್ದಾರೆ.
ಇಳಿ ವಯಸ್ಸಲ್ಲೂ ಮತಗಟ್ಟೆಗೆ ಬಂದು ವೋಟ್ ಮಾಡಿದ 90ವರ್ಷದ ಅಜ್ಜಿ…!
ಕರ್ನಾಟಕದಲ್ಲಿಯೂ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಅಂತ್ಯಗೊಂಡಿದ್ದು, ಎರಡನೇ ಹಂತದ ಮತದಾನ ಪ್ರಕ್ರಿಯೇ ಮುಂದಿನ ತಿಂಗಳು ಅಂದರೆ ಮೇ 7 ರಂದು ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಲೇ ಇದೆ. ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ. ಇದೀಗ ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಿಸಲು ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಮೇ 7 ರಂದು ಲೋಕಸಭೆ ಚುನಾವಣೆ 14 ಕ್ಷೇತ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ.
ಈ ಮಧ್ಯೆ ರಾಜ್ಯದ ಎರಡನೇ ಹಂತದ ಮತದಾನ ರಾಯಚೂರಿನಲ್ಲೂ ನಡೆಯಲಿದ್ದು, ಈ ಹಿನ್ನೆಲೆ ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಿಸಿಲು ಆದೇಶ ಹೊರಡಿಸಿದ್ದು, ಈ ಬಗ್ಗೆ ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ರಜೆ ನೀಡುವಂತೆ ಆದೇಶ ನೀಡಿದ್ದಾರೆ. ಈ ಆದೇಶದ ಅನ್ವಯ ಮೇ 07 ರಂದು ವೇತನ ಸಹಿತ ರಜೆ ನೀಡುವಂತೆ ಡಿಸಿ ಹೇಳಿದ್ದಾರೆ.
ಆದ್ದರಿಂದ ರಾಯಚೂರು ಜಿಲ್ಲಾಧಿಕಾರಿಯ ಆದೇಶದಂತೆ ಮೇ 7 ರಂದು ಸರಕಾರಿ ಕಚೇರಿ, ಶಾಲಾ ಕಾಲೇಜ್, ಸರಕಾರಿ ಸ್ವಾಮ್ಯದ ಸಂಸ್ಥೆ ಜೊತೆಗೆ ವ್ಯವಹಾರಿಕ ಸಂಸ್ಥೆಗಳಿಗೂ ರಜೆ ಘೋಷಣೆಯಾಗಲಿದೆ. ಈ ಆದೇಶ ಜಿಲ್ಲೆಯ ಜನಸಾಮಾನ್ಯರಿಗೆ ಮತದಾನ ಮಾಡಲು ಅನುಕೂಲವಾಗುವ ದೃಷ್ಟಿಯಿಂದ ಮಾಡಲಾಗಿದೆ