ಚಿಕ್ಕಮಗಳೂರು: ತನ್ನ ವಿರುದ್ಧ ಪತ್ರ ಅಭಿಯಾನ, ಗೋ ಬ್ಯಾಕ್ ಶೋಭಕ್ಕ ವಿರುದ್ಧ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ಕಿಡಿಕಾರಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ.
ಈ ದರ್ಪದಿಂದಲೇ ಕೆಲವರು ಮಾಡುತ್ತಿದ್ದಾರೆ, ಮಾಡಿಸುತ್ತಿದ್ದಾರೆ. ವ್ಯವಸ್ಥಿತವಾಗಿ ದುಡ್ಡಿನ ಅಹಂಕಾರದಿಂದ ಈ ರೀತಿ ಮಾಡ್ತಿದ್ದಾರೆ. ಷಡ್ಯಂತ್ರಕ್ಕೆ ಉತ್ತರ ನಾನು ಕೊಡಲ್ಲ, ನಮ್ಮ ನಾಯಕರು, ದೊಡ್ಡವರು ಕೊಡ್ತಾರೆ. ಯಾರು ಬರೆದರೂ, ಬರೆಸಿದವರು ಯಾರು, ಯಾವ ಹ್ಯಾಂಡ್ ರೈಟಿಂಗ್ ಬರೆದರು ಎಲ್ಲಾ ಗೊತ್ತಿದೆ. ನನ್ನ ಹಿರಿಯರ ಮೇಲೆ ನಂಬಿಕೆ ಇದೆ, ಅವರು ಉತ್ತರ ನೀಡುತ್ತಾರೆ. ಕೇಂದ್ರ ಕೂಡ ಎಲ್ಲಾ ವರದಿ ತರೆಸಿಕೊಂಡಿದೆ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
Health Benefits of Lotus seeds: ತಾವರೆ ಬೀಜಗಳಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗವಿದೆ ಗೊತ್ತಾ..?
ಇದೇ ವೇಳೆ ಶೋಭಾ ಮೊದ್ಲು ಟಿಕೆಟ್ (Ticket) ಉಳಿಸಿಕೊಳ್ಳಲಿ ಎಂದ ಎಂ.ಬಿ.ಪಾಟೀಲ್ ಗೆ (MB Patil) ತಿರುಗೇಟು ನೀಡಿದ ಅವರು, ಸಿಎಂ-ಡಿಸಿಎಂ ಮಧ್ಯೆ ಏನು ನಡೀತಿದೆ ಅನ್ನೋದು ಚುನಾವಣೆ ಬಳಿಕ ಹೊರಬರಲಿದೆ. ಕಾಂಗ್ರೆಸ್ ನಲ್ಲಿ (Congress) ಏನು ನಡೆಯುತ್ತಿದೆ ಅನ್ನೋದು ಅವರಿಗೆ ಗೊತ್ತಿದೆ. ಕಾಂಗ್ರೆಸ್ಸಿಗೆ ಅವರ ಎಂ.ಎಲ್.ಎ. ಉಳಿಸಿಕೊಳ್ಳಲು ಆಗಲ್ಲ ಅಂತ ಬಿಜೆಪಿ ಶಾಸಕರಿಗೆ ಕೈ ಹಾಕಿದೆ. ಚುನಾವಣೆ ಬಳಿಕ ಎಲ್ಲವೂ ಹೊರಬರಲಿದೆ ಎಂದು ವಾಗ್ದಾಳಿ ನಡೆಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)