ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು IPL ಪಂದ್ಯ ನಡೆಯಲಿದೆ.
ಮುಂಬೈನ ತವರು ವಾಂಖೆಡೆಯಲ್ಲಿ ನಡೆಯಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಲೀಗ್ನಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿರುವ ಮುಂಬೈ ತಂಡ ಇದೀಗ ಗೆಲುವಿನ ಹಳಿಗೆ ಮರಳಿದೆ. ಮುಂಬೈ ತನ್ನ ತವರು ನೆಲದಲ್ಲಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಜಯ ಸಾಧಿಸಿದೆ. ಇತ್ತ ಆರ್ಸಿಬಿ ತಂಡ ಕಳೆದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಿದರ ಹೊರತಾಗಿಯೂ ತಂಡ ಸೋತಿತು. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮುಖ್ಯವಾಗಿದ್ದು, ಯಾವ ಆಡುವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.
ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭರ್ಜರಿ ಏರಿಕೆ – ಇಲ್ಲಿದೆ ಇಂದಿನ ದರಪಟ್ಟಿ!
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ, ಮುಂಬೈ ತಂಡದ ಪರ ಸೂರ್ಯಕುಮಾರ್ ಯಾದವ್ ಖಾತೆ ತೆರೆಯದೆ ಔಟಾದರು ಎಂಬುದನ್ನು ಬಿಟ್ಟರೆ, ಉಳಿದಂತೆ ತಂಡದ ಪ್ರದರ್ಶನ ಅದ್ಭುತವಾಗಿತ್ತು. ಇಶಾನ್ ಕಿಶನ್ ಮತ್ತು ರೋಹಿತ್ ಉತ್ತಮ ಫಾರ್ಮ್ನಲ್ಲಿದ್ದು, ತಂಡಕ್ಕೆ ಉತ್ತಮ ಆರಂಭವನ್ನು ನೀಡುತ್ತಿದ್ದಾರೆ. ಇದಲ್ಲದೇ ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಅವರೊಂದಿಗೆ ಹಾರ್ದಿಕ್ ಪಾಂಡ್ಯ ಕೂಡ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದಾರೆ
ಈ ಸೀಸನ್ನಲ್ಲಿ ಆರ್ಸಿಬಿ ತಂಡಕ್ಕೆ ವಿಶೇಷವಾದದ್ದೇನೂ ಇಲ್ಲ. ಈ ಸ್ಟಾರ್-ಸ್ಟಡ್ ಶೋ ನಿರಾಶೆಯನ್ನು ಮುಂದುವರೆಸಿದೆ. ವಿರಾಟ್ ಕೊಹ್ಲಿಯಂತಹ ಬ್ಯಾಟ್ಸ್ಮನ್ ತಂಡದ ಪರ ಶತಕ ಬಾರಿಸಿದರೂ ಗೆಲ್ಲಲು ಸಾಧ್ಯವಾಗುತ್ತಿಲ್ಲ. ಫಾಫ್ ಡು ಪ್ಲೆಸಿಸ್ ಉತ್ತಮ ಆರಂಭ ನೀಡಲು ವಿಫಲರಾಗಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಅವರ ಬ್ಯಾಟ್ ಸದ್ದು ಮಾಡುತ್ತಿಲ್ಲ. ಕ್ಯಾಮೆರಾನ್ ಗ್ರೀನ್ಗೆ ಮುಕ್ತವಾಗಿ ಆಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಂಡದ ಮಧ್ಯಮ ಕ್ರಮಾಂಕ ಸಂಪೂರ್ಣವಾಗಿ ವಿಫಲವಾಗಿದ್ದರೆ, ಇತ್ತ ಬೌಲಿಂಗ್ ಸಂಪೂರ್ಣವಾಗಿ ನಿಷ್ಪರಿಣಾಮಕಾರಿಯಾಗಿದೆ. ಇದೇ ಕಾರಣಕ್ಕೆ ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ತಂಡ ಬದಲಾದ ತಂತ್ರಗಾರಿಕೆಯೊಂದಿಗೆ ಮೈದಾನಕ್ಕಿಳಿಯಬಹುದಾಗಿದ್ದು, ಕೆಲ ದೊಡ್ಡ ಬದಲಾವಣೆಗಳನ್ನೂ ಕಾಣಬಹುದು