ಬೆಂಗಳೂರು:- ಜಯನಗರದಲ್ಲಿ ಕೋಟ್ಯಾಂತರ ರುಪಾಯಿ ಸೀಜ್ ಕೇಸ್ ಗೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ x ಮಾಡಿರುವ ಅವರು,ಈ ಹಣವನ್ನು ಪ್ರಧಾನಿಯ ಬೆಂಗಳೂರು ಕಾರ್ಯಕ್ರಮಕ್ಕೆ ಜನ ಸೇರಿಸಲು ಬಳಸುವ ಉದ್ದೇಶದಿಂದ ಸಾಗಿಸುತ್ತಿದ್ದರೆ? ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಚುನಾವಣೆ ನಡೆಸುವುದು, ಬಹುಮತ ಬರದಿದ್ದಾಗ ನೂರಾರು ಕೋಟಿ ಹಣ ಹಾಕಿ ಶಾಸಕರು, ಸಂಸದರನ್ನು ಖರೀದಿಸುವುದು ಬಿಜೆಪಿ ಜಾಯಮಾನ. ಈಗ ಅವರ ಹಣವಂತೂ ಹೋಗಿದೆ, ಮಾನವನ್ನಾದರೂ ಉಳಿಸಿಕೊಳ್ಳಬೇಕು ಎನ್ನುವ ಕಾರಣದಿಂದ ಕಾಂಗ್ರೆಸ್ ಮೇಲೆ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಈ ಬಾರಿಯ ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭಯ ಉಂಟಾಗಿದ್ದು, ಲೂಟಿ ಮಾಡಿದ ಹಣವನ್ನೆಲ್ಲ ಖರ್ಚು ಮಾಡಿಯಾದರೂ ಶತಾಯಗತಾಯ ಗೆಲ್ಲಬೇಕು ಎಂದು ಅವರ ತಂಡ ಹೊರಟಿರುವಂತಿದೆ. ನಾವು ಜನ ಬಲವನ್ನು ನಂಬಿದವರು, ಬಿಜೆಪಿಯಂತೆ ಹಣ ಬಲವನ್ನಲ್ಲ ಎಂದು ರಾಮಲಿಂಗಾ ರೆಡ್ಡಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.