ಬೆಂಗಳೂರು: ಶಿಶುಮರಣ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬೇಬಿ ಅಂಬುಲೆನ್ಸ್ಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ.
ರಾಜ್ಯದಲ್ಲಿ ಶಿಶುಮರಣ ಪ್ರಮಾಣ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಹುಟ್ಟಿದ ಮಗುವಿನಿಂದ ಹಿಡಿದು ಐದು ವರ್ಷದೊಳಗಿನ ಮಕ್ಕಳ ತುರ್ತು ಚಿಕಿತ್ಸೆಗಾಗಿ ಮತ್ತು ನವಜಾತ ಶಿಶುಗಳಿಗಾಗಿ ಬೇಬಿ ಅಂಬುಲೆನ್ಸ್ಗೆ ಚಾಲನೆ ನೀಡಲಾಗಿದೆ
Gruha Lakshmi Scheme: ಅರ್ಜಿ ಸಲ್ಲಿಸಿದ್ರೂ 2000 ರೂ. ಬಂದಿಲ್ಲವೇ..? ಇದು ಕೂಡ ಕಾರಣ ಆಗಿರಬಹುದು.! ಈಗಲೇ ಸರಿಪಡಿಸಿ
ತಾಯಿಯ ಗರ್ಭದಿಂದ ಬರುವ ಮಗು ಹೊರಗಿನ ಜಗತ್ತಿಗೆ ಹೊಂದಿಕೊಳ್ಳಲು ಹರಸಾಹಸ ಪಡುತ್ತದೆ. ಈ ಸಂದರ್ಭದಲ್ಲಿ ನವಜಾತ ಶಿಶುಗಳಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಮಗುವನ್ನು ಶಿಫ್ಟ್ ಮಾಡುವಾಗ ತುರ್ತು ಆರೋಗ್ಯ ಸೇವೆ ಒದಗಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ನವಜಾತ ಶಿಶುಗಳ ಆಂಬುಲೆನ್ಸ್ ಸೇವೆಯನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಾರಂಭಿಸಿದೆ
ಎಲ್ಲೆಲ್ಲಿ ಕಾರ್ಯ ನಿರ್ವಹಿಸಲಿವೆ?
ಬೇಬಿ ಅಂಬುಲೆನ್ಸ್ಗಳು ಬೆಂಗಳೂರು ಮಾತ್ರವಲ್ಲದೇ ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯಲ್ಲಿ ಸದ್ಯಕ್ಕೆ ಕಾರ್ಯ ನಿರ್ವಹಿಸಲಿವೆ. ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ, ಮೈಸೂರಿನ ಚಲುವಾಂಬ ಆಸ್ಪತ್ರೆ, ರಾಯಚೂರಿನ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ನವಜಾತ ಅಂಬುಲೆನ್ಸ್ಗಳನ್ನು ನಿಗದಿಪಡಿಸಲಾಗಿದೆ. ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡುವುದರಿಂದ ಗಂಭೀರ ಅನಾರೋಗ್ಯ ಸಮಸ್ಯೆ ಇರುವ ನವಜಾತ ಶಿಶುಗಳು ಬದುಕುಳಿಯುವ ಸಾಧ್ಯತೆಗಳು ಹೆಚ್ಚಾಗಲಿದೆ. ಈ ಅಂಬುಲೆನ್ಸ್ನಲ್ಲಿ ಪರಿಣಿತ ವೈದ್ಯರು, ನರ್ಸ್ಗಳು ಇರುತ್ತಾರೆ.