ಧಾರವಾಡ: ಬಾಲಕರ ವಸತಿ ನಿಲಯಕ್ಕೆ ಸಚಿವ ಹೆಚ್ ಸಿ ಮಹದೇವಪ್ಪ ಧಿಡೀರ್ ಭೇಟಿ ನೀಡಿದ್ದಾರೆ. ಧಾರವಾಡದ ಸರಕಾರಿ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯವಾಗಿದ್ದು, ವಸತಿ ನಿಲಯದ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ವಸತಿ ನಿಲಯದ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಫೀಡ್ ಬ್ಯಾಕ್ ಕೇಳಿದ್ದಾರೆ. ಹಾಸ್ಟೆಲ್ ವಾರ್ಡನ್ಗಳಿಂದ ವಸತಿ ನಿಲಯ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಅಧಿಕಾರಿಗಳಿ ಸೂಚನೆ ನೀಡಿದ್ದಾರೆ.