ಕೋಲಾರ: ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವಂತಹ ಘಟನೆ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗ್ರಾಮದ ಬಳಿ ನಡೆದಿದೆ.
ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಮುಳಬಾಗಿಲು ಸಬ್ಇನ್ಪೆಕ್ಟರ್ ವಿಠಲ್ ತಳವಾರ್ ಅವರಿಂದ ಆರೋಪಿಗಳ ಎರಡೂ ಕಾಲುಗಳಿಗೆ ಫೈರಿಂಗ್ ಮಾಡಿದ್ದಾರೆ. ಹಲ್ಲೆ ನಡೆಸಿದ್ದರಿಂದ ಪಿಎಸ್ಐ, ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.