ಚಿಕ್ಕಮಗಳೂರು:- ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಆಟವಾಡುವಾಗ ಏರ್ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜರುಗಿದೆ.
ಏರ್ ಗನ್ ಇಟ್ಟುಕೊಂಡು ಆಟ ಆಡುವಾಗ ಬಾಲಕ ಟ್ರಿಗರ್ ಒತ್ತಿದ್ದಾನೆ. ಗನ್ ಮಿಸ್ ಫೈರ್ ಆಗಿ ಗುಂಡು ಬಾಲಕನ ದೇಹದೊಳಗೆ ಹೊಕ್ಕಿದೆ. 7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ.
![Demo](https://ainlivenews.com/wp-content/uploads/2023/12/spoorthi-1.jpg)
ಕಾಫಿ ತೋಟದಲ್ಲಿ ಮಂಗಗಳನ್ನ ಓಡಿಸಲು ಬಳಸುವ ಏರ್ ಗನ್ ಜೊತೆ ವಿಷ್ಣು ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ವಿಷ್ಣು ಅಚಾನಕ್ ಆಗಿ ಟ್ರಿಗರ್ ಒತ್ತಿದ್ದಾನೆ. ಪರಿಣಾಮ ಏರ್ ಗನ್ ಫೈರ್ ಆಗಿದ್ದು, ನೇರವಾಗಿ ಗನ್ನೊಳಗಿದ್ದ ಬಾಲ್ಸ್ ವಿಷ್ಣುವಿನ ಹೃದಯ ಭಾಗಕ್ಕೆ ಹೊಕ್ಕಿದೆ. ಪೋಷಕರು ಮನೆಯಲ್ಲಿ ಇದ್ದಾಗಲೇ ಈ ದುರ್ಘಟನೆ ಸಂಭವಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)