ಹುಬ್ಬಳ್ಳಿ: ಕಳೆದ ತಿಂಗಳು 29ರಂದು ನಾಪತ್ತೆಯಾಗಿದ್ದ ಮಹಿಳೆ ದೇವನೂರ ಗ್ರಾಮದ ಬೆಣ್ಣೆ ಹಳ್ಳದ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಇದು ಕೊಲೆ ಎಂದು ಮಹಿಳೆಯ ಪತಿ ದೂರು ದಾಖಲಿಸಿದ್ದಾರೆ.
Gold Price: ಬೆಳ್ಳಿ ಬೆಲೆ ಇಳಿಕೆ; ಭಾರತದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು ಗೊತ್ತಾ!?
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವಿಠಲಾಪುರ ಗ್ರಾಮದ ಮಂಜುಳಾ ಹುತ್ತನಗೌಡರ (28) ಎಂಬ ಮಹಿಳೆ ಜು. 29ರಂದು ಮನೆಯಿಂದ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಕುಂದಗೋಳ ತಾಲೂಕಿನ ದೇವನೂರ ಗ್ರಾಮದ ಬಳಿಯ ಬೆಣ್ಣೆ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಕುಂದಗೋಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಹಳ್ಳದಲ್ಲಿ ಪತ್ತೆಯಾಗಿರುವ ಮಹಿಳೆ ಶವ ಹೊರ ತೆಗೆದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಶವ ಪರೀಕ್ಷೆಗೆ ರವಾನಿಸಿದ್ದಾರೆ.
ದೂರು: ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದ ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದ ಯುವಕನೊಬ್ಬ ಆತನ ತಂದೆಯ ಕುಮ್ಮಕ್ಕಿನಿಂದ ಮಹಿಳೆಯನ್ನು ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.