ಚನ್ನರಾಯಪಟ್ಟಣ: ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರನ್ನು ದೇವೇಗೌಡರು ಘೋಷಿಸಿದ್ದಾರೆ. ಅವರು ಸೂಚಿಸುವ ವ್ಯಕ್ತಿಯನ್ನು ಲೋಕಸಭೆಗೆ ಕಳುಹಿಸಬೇಕಿದೆ. ಇದರಿಂದ ಜಿಲ್ಲೆಯ ಸರ್ವಾಂಗೀಣ ಪ್ರಗತಿಯಾಗುತ್ತದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಕರಿಯಪ್ಪ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಕ್ಷೇತ್ರದ ಜನರು ನಿಂತಿದ್ದಾರೆ, ಮುಂದೆ ಬರುವ ಚುನಾವಣೆಯಲ್ಲಿಯೂ ಮತದಾರರು ಜೆಡಿಎಸ್ ಪರ ನಿಲ್ಲಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನ ಮಂತ್ರಿಯಾದ ಎಚ್ ಡಿ ದೇವೇಗೌಡ,ಮಾಜಿ ಮಂತ್ರಿಗಳಾದ ಎಚ್ ಡಿ ರೇವಣ್ಣ, ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ, ಶಾಸಕ ಸಿ ಎನ್ ಬಾಲಕೃಷ್ಣ, ಮಾಜಿ ಶಾಸಕ ಲಿಂಗೇಶ್, ಜೆಡಿಎಸ್ ಮುಖಂಡರಾದ ಪರಮ ದೇವರಾಜೇಗೌಡ, ಸಿ ಕೆ ಕುಸುಮ ರಾಣಿ, ಮಮತಾ ರಮೇಶ್, ಅಂಬಿಕಾ ರಾಮಣ್ಣ, ನವಿಲು ಹೊಸೂರು ಚಂದ್ರಪ್ಪ, ಎಸ್ ಪಿ ಜಗದೀಶ್ ಸೇರಿದಂತೆ ಇತರರು ಹಾಜರಿದ್ದರು.