ಧಾರವಾಡ: ಹುಬ್ಬಳ್ಳಿ ಗಲಭೆ ಪ್ರಕರಣವರನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದ್ದಕ್ಕೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಎಸ್ಡಿಪಿಐ ಹಾಗೂ ಪಿಎಫ್ಐ ಮೇಲಿನ ಕೇಸ್ ಮರಳಿ ಪಡೆದರು. ಬೆಂಗಳೂರಿನಲ್ಲಿ ನಡೆದಿದ್ದ ಗಲಭೆಯ ಕೇಸ್ನಲ್ಲಿದ್ದವರನ್ನು ಬಿಡುಗಡೆ ಮಾಡಿದರು.
ಕುಕ್ಕರ್ ಬಾಂಬ್ ಸ್ಪೋಟ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಕರೆದರು. ಹುಬ್ಬಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಸುಡಲು ಯತ್ನಿಸಿದವರ ಮೇಲಿನ ಕೇಸ್ ವಾಪಸ್ ಪಡೆದಿದ್ದಾರೆ. ಅದರಲ್ಲಿ 120 ಜನ ಆರೋಪಿಗಳಿದ್ದಾರೆ. ಈ ಬಗ್ಗೆ ಎನ್ಐಎ ಕೇಸ್ ಕೂಡ ಆಗಿತ್ತು. ಅದನ್ನೂ ಮರಳಿ ಪಡೆಯಲು ನಿರ್ಧರಿಸಲಾಗಿದೆ. ಇದು ದೇಶ ವಿರೋಧಿ ಶಕ್ತಿಗಳಿಗೆ ಬೆಂಬಲ ಕೊಡುವಂತಹ ಕೆಲಸವಾಗಿದೆ ಎಂದರು. ಆಡಳಿತ ನಡೆಸುವವರು ಗಲಭೆಕೋರರಿಗೆ ಎಚ್ಚರಿಕೆ ಕೊಡಬೇಕು. ಆಸ್ತಿ ಹಾಳು ಮಾಡುವವರಿಗೆ ಎಚ್ಚರಿಕೆ ಕೊಡಬೇಕು. ಎಲ್ಲರ ಮೇಲೂ ಒಂದೇ ರೀತಿಯ ಕ್ರಮ ತೆಗೆದುಕೊಳ್ಳಬೇಕು.
ಯಶಸ್ಸಿನ ಹಾದಿ ತಲುಪಲು ಏನೂ ಮಾಡಬೇಕು? ‘ರತನ್ ಟಾಟಾ’ ನೀಡಿರುವ ಟಾಪ್ 10 ಮಾತುಗಳು ಇಲ್ಲಿವೆ.!
ಆದರೆ, ಇಂತಹ ಗಲಭೆ ಕೇಸ್ನ್ನು ಈ ಸರ್ಕಾರ ಮರಳಿ ಪಡೆಯುತ್ತಾರೆ ಎಂದರೆ ಇವರ ಬೆಂಬಲ ಯಾರಿಗೆ ಇದೆ? ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಅವರ ಅಧಿಕಾರ ಹೋಗುವುದು ಖಚಿತವಾಗಿದೆ. ಅದಕ್ಕೆ ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಾಮಾನ್ಯ ಮುಸ್ಲಿಂರು ಕೂಡ ಇದನ್ನು ಒಪ್ಪುತ್ತಿಲ್ಲ. ಈ ರೀತಿ ಮಾಡಿಯೇ ಪಕ್ಷ ದೇಶದಾದ್ಯಂತ ನೆಲಕಚ್ಚಿದೆ. ಹರಿಯಾಣ, ಕಾಶ್ಮೀರದಲ್ಲಿ ಕಾಂಗ್ರೆಸ್ಗೆ ಕೆಟ್ಟ ಪರಿಸ್ಥಿತಿ ಬಂದಿದೆ. ದೇಶಕ್ಕೆ ಒಳ್ಳೆಯದಾಗುವ ನಿರ್ಧಾರವನ್ನು ಈ ಸರ್ಕಾರ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಜನ ಇವರನ್ನು ತಿರಸ್ಕರಿಸುತ್ತಿದ್ದಾರೆ. ಇನ್ನಾದರೂ ಕಾಂಗ್ರೆಸ್ನವರು ಎಚ್ಚೆತ್ತುಕೊಳ್ಳಬೇಕು ಎಂದು ಬೆಲ್ಲದ ತಿಳಿಸಿದರು.