ಬೆಂಗಳೂರು: ವಿಧಾನಸಭೆಯಲ್ಲಿ (Karnataka Legislative Assembly) ಬಿಜೆಪಿ (BJP) ಸದಸ್ಯರ ಆಕ್ಷೇಪ ವಿರೋಧಿಸುವ ಭರದಲ್ಲಿ ಶಾಸಕ ರಾಜೇಗೌಡ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ (Karnataka Legislative Assembly) ಅವರನ್ನು ಗೂಂಡಾ ಎಂದು ಕರೆದಿದ್ದು, ಭಾರೀ ಗದ್ದಲಕ್ಕೆ ಕಾರಣವಾಯಿತು.
Budjet 2024: ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ: ಎಚ್.ಡಿ.ಕುಮಾರಸ್ವಾಮಿ
ಈ ವೇಳೆ ಮಧ್ಯಪ್ರವೇಶ ಮಾಡಿದ ಸ್ಪೀಕರ್ ಖಾದರ್, ಗುಜರಾತ್ ನಿಂದ ಕರ್ನಾಟಕದ ಕರಾವಳಿಯವರೆಗೆ ಸ್ಮಗ್ಲರ್ಗಳು ಆಳುತ್ತಿದ್ದರು. ಆದರೆ, ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಕರೀಂ ಲಾಲ, ಹಾಜಿ ಮಸ್ತಾನ್ ಸೇರಿದಂತೆ ಸ್ಮಗ್ಲರ್ಗಳನ್ನು ಜೈಲಿಗೆ ಹಾಕಿದ್ದು ತುರ್ತುಪರಿಸ್ಥಿತಿ ಕಾಲದಲ್ಲಿ ಇಂದಿರಾ ಗಾಂಧಿಯವರು. ಈ ನಿಟ್ಟಿನಲ್ಲಿ ತುರ್ತುಪರಿಸ್ಥಿತಿ ಸಾಧಕ ಬಾಧಕ ಬಗ್ಗೆ ಚರ್ಚೆ ಆಗಲಿ ಎಂದರು. ಇದಕ್ಕೆ ಆರಗ ಜ್ಞಾನೇಂದ್ರ ಆಕ್ಷೇಪ ವ್ಯಕ್ತಪಡಿಸಿ, ಸಂವಿಧಾನದ ಮೇಲೆ ಅತ್ಯಾಚಾರ ಮಾಡಿದ್ದು ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ. ಹಾಗಾಗಿ ಸಮರ್ಥನೆ ಮಾಡಬಾರದು. ನಾವು ಜೈಲಿನಲ್ಲಿ ಇದ್ದೆವು. ಸಾಮಾನ್ಯ ಜನರಿಗೆ ಕಿರುಕುಳ ಆಗಿದೆ. ಎಳೆದುಕೊಂಡು ಹೋಗಿ ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿದರು ಎಂದರು.