ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಹಲವೆಡೆ ಇಂದು ಶಾಸಕ ರಾಜು ಕಾಗೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾಗವಾಡ ಗ್ರಾಮದ ಒಟ್ಟು 46 ಜನ ರೈತರ 112 ಎಕರೆ ಭೂಮಿಗೆ ಸವಳು ಜವಳು ಭೂ ಸುಧಾರಣೆ ಯೋಜನೆ,ಡಾ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ಐನಾಪೂರ ಗ್ರಾಮದಲ್ಲಿ ನೂರು ಜನ ಫಲಾನುಭವಿಗಳಿಗೆ ಮನೆ ಕಾಮಗಾರಿಗೆ ಆದೇಶ ಪತ್ರ ವಿತರಣೆ,ಶಂಬರಗಿ,ಜಂಬಗಿ ಗ್ರಾಮಗಳಿಗೆ ಚೆಕ್ ಡ್ಯಾಂ ನಿರ್ಮಾಣ ಮತ್ತು ಐನಾಪೂರ ಗ್ರಾಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್,
ಒಂದು ಕಾಲದಲ್ಲಿ ಕೊತ್ತಂಬರಿ ಸೊಪ್ಪು ಮಾರುತ್ತಿದ್ದ ವ್ಯಕ್ತಿ ಈಗ ಬಾಲಿವುಡ್ ಸ್ಟಾರ್ ನಟ..!
ಕಟ್ಟಡ ಕಾಮಗಾರಿಗೆ ಅಡಿಗಲ್ಲು ಸಮಾರಂಭ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ರಾಜು ಕಾಗೆ ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸಿದ ಮತದಾರರು ಸಾಮಾಜಿಕ ನ್ಯಾಯ,ಕುಡಿಯುವ ನೀರು,ಶಾಲೆ,ಆಸ್ಪತ್ರೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕೇಳಬೇಕು ಆಗ ಮಾತ್ರ ಅಭಿವೃದ್ಧಿ ಸಾಧ್ಯ ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಸೂಕ್ತವಾಗಿ ಸ್ಪಂದಿಸಬೇಕು ಎಂದರು.