ಕಾರವಾರ: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಪುತ್ರ ವಿವೇಕ್ ಹೆಬ್ಬಾರ್ (Vivek Hebbar) ಗುರುವಾರ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ವಿವೇಕ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ್ ಹೆಬ್ಬಾರ್ ಅವರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್ ‘ಕೈ’ ಹಿಡಿದಿದ್ದಾರೆ.