ಬೆಂಗಳೂರು: ಬೆಂಗಳೂರಿನಿಂದ-ಧರ್ಮಸ್ಥಳಕ್ಕೆ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಸೈಕಲ್ ಯಾತ್ರೆ ಕೈಗೊಂಡಿದ್ದರು. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟು ಇಂದು ಧರ್ಮಸ್ಥಳಕ್ಕೆ ತಲುಪಿದ್ದಾರೆ. ದಿ ರಾಜಾಜಿನಗರ ಪೆಡಲ್ ಪವರ್ ತಂಡದ ಮೂಲಕ ಮೂರು ದಿನಗಳ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದರು. ಎಂಟು ಜನ ಸಹ ಸವಾರರ ಜೊತೆ ತೆರಳಲಾಗಿತ್ತು.
Diwali Spl: ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು
ಈ ಬಗ್ಗೆ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ. 2014ರಲ್ಲಿ ನಾನು ಗೆಳೆಯರ ಜೊತೆ ಪಾದಯಾತ್ರೆ ಮಾಡಿಕೊಂಡಿದ್ದನ್ನು ಮೆಲುಕು ಹಾಕಿದ್ದಾರೆ. ಆಗ ಎಂಟು ದಿನಗಳ ಯಾತ್ರೆ ಮಾಡಿದ್ದೆವು ಎಂದು ಇದರ ಬಗ್ಗೆ ಬರೆದುಕೊಂಡಿದ್ದಾರೆ.
ಹಾಗೆ ಪ್ರಯಾಣದ ವೇಳೆ ಸಹಾಯ ಮಾಡಿ ಆತಿಥ್ಯ ನೀಡಿದ ಎಲ್ಲರಿಗೂ ಸಹ ನನ್ನ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ.