ಕೋಲ್ಕತ್ತಾ:- ಧ್ಯಾನ ಮಾಡಲು ತಮಿಳುನಾಡಿನ ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಭೇಟಿ ನೀಡುವ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಟುವಾಗಿ ಟೀಕಿಸಿದ್ದಾರೆ.
Bengaluru: ಸಿಲಿಕಾನ್ ಸಿಟಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ.. ಗಾಬರಿಗೊಂಡ ಸಾರ್ವಜನಿಕರು!
ಯಾರು ಬೇಕಾದರು ಹೋಗಿ ಧ್ಯಾನ ಮಾಡಬಹುದು. ಆದರೆ ಧ್ಯಾನ ಮಾಡುವಾಗ ಕ್ಯಾಮೆರಾ ತೆಗೆದುಕೊಂಡು ಹೋಗುತ್ತಾರೆಯೇ ಎಂದು ದೀದಿ ಪ್ರಶ್ನಿಸಿದ್ದಾರೆ. ಅಲ್ಲದೇ ಚುನಾವಣೆಗೆ 48 ಗಂಟೆಗಳ ಮೊದಲು ಎಸಿ ರೂಮಿನಲ್ಲಿ ಹೋಗಿ ಕೂರುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣಾ ಪ್ರಚಾರದ ನಂತರ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರಿಗೆ ಗೌರವಾರ್ಥವಾಗಿ ನಿರ್ಮಿಸಲಾದ ಸ್ಮಾರಕವಾದ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾನು ಕೂಡ ಕನ್ಯಾಕುಮಾರಿಗೆ ಭೇಟಿ ನೀಡುವ ಪ್ಲಾನ್ ಮಾಡಿದ್ದೆ. ಆದರೆ ಮೋದಿಯವರು ಅಲ್ಲಿಗೆ ಭೇಟಿ ನೀಡುವ ಕುರಿತು ತಿಳಿದುಕೊಂಡೆ ಎಂದರು.
ಮೋದಿ ಭೇಟಿಯ ಕುರಿತು ಯಾಕೆ ಯಾರೂ ಬಾಯಿಬಿಡುತ್ತಿಲ್ಲ ಎಂದು ನನಗೆ ತಿಳಿದಿಲ್ಲ. ಸ್ವಾಮಿ ವಿವೇಕಾನಂದರು ಅಲ್ಲಿ ಧ್ಯಾನ ಮಾಡಿದ್ದರು. ಆದರೆ ಈಗ ಪ್ರಧಾನಿ ಅಲ್ಲಿಗೆ ಹೋಗಿ ಧ್ಯಾನ ಮಾಡುತ್ತಿದ್ದಾರೆ. ಇದು ನಿಜಕ್ಕೂ ನನಗೆ ತುಂಬಾ ಬೇಸರ ತಂದಿದೆ ಎಂದು ಬ್ಯಾನರ್ಜಿ ಹೇಳಿದರು.