ಉಡುಪಿ: ಏಪ್ರಿಲ್ 14ರ ಸಂಜೆ 4ಕ್ಕೆ ಮಂಗಳೂರಿನ (Mangaluru) ಗೋಲ್ಡ್ ಫಿಂಚ್ (Gold Finch) ಮೈದಾನದಲ್ಲಿ ಪ್ರಧಾನಿ ಮೋದಿ (Narendra Modi) ಸಮಾವೇಶ ಉದ್ದೇಶಿಸಿ ಮಾತನಾಡುತ್ತಾರೆ. ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು, ಮತದಾರರು ಭಾಗಿಯಾಗಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದರು.
ಈ ಕುರಿತು ಉಡುಪಿಯಲ್ಲಿ (Udupi) ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮದಿಂದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬರಲಿದೆ. ಪ್ರಧಾನಿ ಎಲ್ಲಾ ಜಿಲ್ಲೆಗೆ ಬಂದು ಮತದಾರರಿಂದ ಆಶೀರ್ವಾದ ಪಡೆಯಬೇಕು ಎಂಬ ಆಕಾಂಕ್ಷೆ ಕಾರ್ಯಕರ್ತರಲ್ಲಿದೆ ಎಂದರು.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಈಶ್ವರಪ್ಪ (KS Eshwarappa) ನಮ್ಮ ಕಟ್ಟಾಳು ಇಡೀ ರಾಜ್ಯದಲ್ಲಿ ಬಿಜೆಪಿ (BJP) ಬೆಳವಣಿಗೆಗೆ ಅವರೂ ಕಾರಣರಾದವರು. ಸಹಜವಾಗಿಯೇ ತನ್ನ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಹಿರಿಯರು ಅವರ ಜೊತೆ ಮಾತನಾಡುತ್ತಾರೆ. ಇದು ವಿಚಾರಧಾರೆಗಳ ನಡುವಿನ ಚುನಾವಣೆ. ಇಲ್ಲಿ ಜಾತಿ ರಾಜಕೀಯ ಇಲ್ಲ. ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ ಎಂದು ಹೇಳಿದರು.