ಮೊಳಕಾಲ್ಮೂರು,ಅ.16-ತಾ ಲೂಕಿನ ರಾಂಪುರ ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೊಬ್ಬನಿಗೆ ಬೀದಿ ನಾಯಿಗಳು ಮರಣಾಂತಿಕವಾಗಿ ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ರಾಂಪುರ ಗ್ರಾಮದ ಬಾಲಕ ಮಿಥುನ್ (10) ಮೃತ ದುರ್ದೇವಿ. ಇಂದು ಬೆಳಗ್ಗೆ ಖಾಸಗಿ ಶಾಲೆಯಲ್ಲಿ ಕೋಚಿಂಗ್ ಹೋಗಿ ಬರುತ್ತಿದ್ದ ವೇಳೆ, ನಾಯಿಗಳು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿ, ತಲೆಯ ಭಾಗ ಸೇರಿದಂತೆ,ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರ ಗಾಯಗೊಳಿಸಿದ್ದು, ಕೂಡಲೇ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.
ಇತ್ತೀಚೆಗೆ, ರಾಂಪುರದಲ್ಲಿ ಬೀದಿ ನಾಯಿಗಳ ಹಾಗೂ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ವಿದ್ಯಾರ್ಥಿಗಳು, ಮಹಿಳೆಯರು ಬೀದಿಗಳಲ್ಲಿ ಓಡಾಡುವುದೇ ಕಷ್ಟವಾಗಿದೆ. ಆದರೆ, ಇಲ್ಲಿನ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು: ಪ್ರತಿದಿನ ಎಳ್ಳನ್ನು ತಿನ್ನುವುದರಿಂದ ಸಿರುವ ಪ್ರಯೋಜನಗಳೇನು ಗೊತ್ತಾ..?
ಇತ್ತೀಚೆಗೆ, ರಾಂಪುರದ ಮತ್ತೊಂದು ಖಾಸಗಿ ಶಾಲೆಯ ಕೋಚಿಂಗ್ ಸೆಂಟರ್ ನ ವಿದ್ಯಾರ್ಥಿ ಹಾಗೂ ಅಂಗನವಾಡಿಗೆ ಹೋಗುವ ಮಕ್ಕಳಿಗೂ ಸಹ, ಬೀದಿ ನಾಯಿ,ಕೋತಿಗಳು ಕಚ್ಚಿ ಗಾಯಗೊಳಿಸಿವೆ ಎನ್ನಲಾಗಿದೆ. ಈ ದುರ್ಘಟನೆಯಿಂದ ಬಾಲಕನ ಪೋಷಕರ ಹಾಗೂ ಸಂಬಂಧಿಕರ ಅಕ್ರಂದನ ಮುಗಿಲುಮುಟ್ಟಿದೆ.
ಕೂಡಲೇ, ಸಂಬಂಧಪಟ್ಟ ಅಧಿಕಾರಿಗಳು, ಜನನಿ ಬಿಡ ಪ್ರದೇಶಗಳಲ್ಲಿ ಬಿಡು ಬಿಟ್ಟು ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿ, ಜನರನ್ನು ಭಯ ಭೀತಿಗೊಳಿಸುತ್ತಿರುವ ಬೀದಿ ನಾಯಿಗಳಿಗೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.