ಚಿಕ್ಕಮಗಳೂರು:: ಇಲ್ಲಿಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ರತ್ನಾ (68) ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನಾ ಮಣಿಪಾಲದ (Manipal) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತ ಪರೀಕ್ಷೆಯಲ್ಲಿ ರತ್ನಾ ಅವರಿಗೆ ಮಂಗನ ಕಾಯಿಲೆ ದೃಢವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ
ಬೆಂಗಳೂರಿಗೆ ಜಲಕಂಟಕ – ಟ್ವೀಟ್ ಮಾಡಿ ಸಲಹೆ ಕೊಟ್ಟ ಟಾಲಿವುಡ್ ನಟ ಮೆಗಾ ಸ್ಟಾರ್ ಚಿರಂಜೀವಿ!
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆ ರೋಗ ಹೆಚ್ಚುತ್ತಿದೆ. ಕೊಪ್ಪ, ಎನ್ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಪ್ರಕರಣ ಹೆಚ್ಚುತ್ತಿದ್ದು, 11 ಕೆಎಫ್ಡಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ