ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ 3 ದಿನ ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಸದಾ ಇರುತ್ತೆ. ಜನರು ಅವಕಾಶ ಮಾಡಿಕೊಟ್ಟಿದ್ದಾರೆ.
ಇದರಿಂದ ಇಷ್ಟೊಂದು ಬಾರಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಸಿಕ್ಕಿದೆ. ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತೆ. ಆ ದೇವರ ಆಶೀರ್ವಾದ ಇಲ್ಲ ಅನ್ನುವುದೇ ಇಲ್ಲ. ಆಶೀರ್ವಾದ ಇರುವುದರಿಂದಲೇ ಇಷ್ಟು ವರ್ಷದಿಂದ ರಾಜಕೀಯದಲ್ಲಿ ಉಳಿದಿರುವುದು ಅಂತ ತಿಳಿಸಿದ್ದಾರೆ.
ಗಮನಿಸಿ.. ನೀವು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿತೀರಾ? ಹಾಗಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ!
ಸಮಾಜದಲ್ಲಿ ಹೊಗಳುವವರೂ ಇರುತ್ತಾರೆ, ತೆಗಳುವವರೂ ಇರುತ್ತಾರೆ. ಆದ್ರೆ ಇಬ್ಬರ ನಡುವೆ ಆರೋಗ್ಯಕರ ಚರ್ಚೆ ಆಗಬೇಕು ಎಂದು ಸಲಹೆ ನೀಡಿದ್ದಾರೆ. ಇನ್ನೂ ಪತ್ರಿಕೆಗಳಲ್ಲಿ ಸರ್ಕಾರದಿಂದ ಜಾಹೀರಾತು ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ,
ದಸರಾ ಅಂದ್ರೆ ದುಷ್ಟ ಶಕ್ತಿಗಳ ಸಂಹಾರ. ಶಿಷ್ಟ ಜನರ ರಕ್ಷಣೆ ಅದೇ ದಸರಾ. ವಿಜಯನಗರದ ಅರಸರು ಜಯದ ಸಂಕೇತವಾಗಿ ಆಚರಣೆ ಮಾಡಿದ್ರು. ಮೈಸೂರು ಅರಸರು ಅದನ್ನ ಮುಂದುವರಿಸಿಕೊಂಡು ಬಂದರು. ಇವತ್ತು ಅದೇ ಸಂಪ್ರದಾಯ ಮುಂದುವರಿದಿದೆ. ಜಾಹಿರಾತನ್ನು ಇವತ್ತಿಗೆ ನೀವು ಹೇಗೆ ವ್ಯಾಖ್ಯಾನ ಮಾಡ್ತಿರಾ ಹಾಗೆ. ನೀವುಗಳು ಕೂಡ ಪರ, ವಿರೋಧವಾಗಿ ವ್ಯಾಖ್ಯಾನ ಮಾಡ್ತೀರಿ ಎಂದು ಕುಟುಕಿದ್ದಾರೆ.