ವಿಜಯಪುರ:– 2024 ರ ಲೋಕಸಭಾ ಚುನಾವಣೆಗೆ ಕಾರ್ಯಪ್ರವೃತ್ತರಾಗಿರುವ ಚುನಾವಣಾ ಅಧಿಕಾರಿಗಳು, ಧೂಳಖೇಡ ಚೆಕ್ ಪೋಸ್ಟ್ ನಲ್ಲಿ 4.5 ಲಕ್ಷ ನಗದು ವಶಕ್ಕೆ ಪಡೆದಿದ್ದಾರೆ.
ಲೋಕಸಭಾ ಚುನಾವಣಾ ಹಿನ್ನಲೆ ಮಹಾರಾಷ್ಟ್ರ ದಿಂದ ವಿಜಯಪುರಕ್ಕೆ ಬರುವಾಗ ತಪಾಸಣೆ ನಡೆಸಲಾಗಿದ್ದು, ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ದಾಖಲೆ ರಹಿತವಾದ 4 ಲಕ್ಷ 50 ಸಾವಿರ ರೂ.ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರ ರಾಜ್ಯದ ಔರಂಗಾಬಾದ ಜಿಲ್ಲೆಯ ರೋಶನ ಗಜಾನನ ಕರನಾಶೆ ಎಂಬಾತನ ಬಳಿ ಯಾವುದೇ ಅಧಿಕೃತ ದಾಖಲೆ ಇಲ್ಲದೆ ಹಣ ಸಾಗಾಟ ಮಾಡಲಾಗಿದೆ. ಎಮ್ ಹೆಚ್ 20 ಎಫ್ ಯು 2039 ಕಾರ್ನಲ್ಲಿ 4 ಲಕ್ಷ 50 ಸಾವಿರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. ಧೂಳಖೇಡ ಮಾರ್ಗದಿಂದ ಬೆಂಗಳೂರ ಕಡೆ ಹೊರಟಿದ್ದರು. ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಹಣ ಜಪ್ತಿ ಮಾಡಲಾಗಿದೆ.
ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.