ಹಾವೇರಿ- 2024 ರ ಲೋಕಸಭಾ ಚುನಾವಣೆಗೆ ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಇಂದು ಏಲಕ್ಕಿ ನಾಡು ಹಾವೇರಿ ‘ಲೋಕ’ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಇಂದು ಭೇಟಿ ನೀಡಲಿದ್ದಾರೆ. ಈ ವೇಳೆ ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ ಬೊಮ್ಮಾಯಿ ಪರ ಮತಯಾಚನೆ ಮಾಡಲಿದ್ದಾರೆ.
ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀ!
ಇನ್ನೂ ಬಿಜೆಪಿ ಟಿಕೆಟ್ ಸಿಗುತ್ತಿದ್ದಂತೆ ಕಾಲಿಗೆ ಚಕ್ರಕಟ್ಟಿ ಕ್ಷೇತ್ರದಲ್ಲಿ ಮಾಜಿ CM ಬೊಮ್ಮಾಯಿ ಪ್ರಚಾರ ಮಾಡುತ್ತಿದ್ದು, ಇಂದು ಹಾವೇರಿ ‘ಲೋಕ’ ಕ್ಷೇತ್ರದಲ್ಲಿ BJP ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ರೋಡ್ ಶೋ ಮೂಲಕ ಬಸವರಾಜ್ ಬೊಮ್ಮಾಯಿ ಪರ BY ವಿಜಯೇಂದ್ರ ಮತಯಾಚನೆ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಹಾವೇರಿ ನಗರ ಪ್ರಮುಖ ರಸ್ತೆಯಲ್ಲಿ ಬೃಹತ್ ರೋಡ್ ಶೋ ಮೂಲಕ ಮತಬೇಟೆ ಮಾಡಲಿದ್ದು, ಸಂಜೆ 7 ಕ್ಕೆ ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜ್ ಮೈದಾನದಲ್ಲಿ ಆಯೋಜಿಸಿದ BJP ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಹಾವೇರಿ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಯತ್ತ ಬಿ.ವೈ ವಿಜಯೇಂದ್ರ ಪ್ರಯಾಣ ಬೆಳೆಸಲಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)