ಮೈಸೂರು: ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಜಮೀನಿನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದರು. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ ಎಂದರು.
ಸುಮ್ಮನೇ ಪ್ರತಿಭಟನೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ. ಮುಡಾ ಅಕ್ರಮದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತಪ್ಪಾಗಿದೆ ಎಂಬುದು ತನಿಖೆಯಲ್ಲಿ ಗೊತ್ತಾದರೆ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
Ration Card: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್! BIG ಅಪ್ಡೇಟ್ ಇಲ್ಲಿದೆ
ಪ್ರಕರಣ ಸಿಬಿಐಗೆ ವಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರನೇ ಸಮರ್ಥರಿಲ್ಲವಾ? ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ ಹೇಳಿ ಎಂದರು. ಈಗೀನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ ಕೆಲಸ ಮಾಡಿದವರು. ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ಮುಡಾ ಹಗರವನ್ನ ಸಿಬಿಐಗೆ ವಹಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ನಿರಾಕರಿಸಿದರು.