ಬೆಂಗಳೂರು: ಮುಡ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಸಿಎಂ, ಡಿಸಿಎಂ ಜೊತೆ AICC ಅಧ್ಯಕ್ಷ ಖರ್ಗೆ ಮಾತನಾಡಿದ್ದಾರೆ.
ಫೋನ್ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ: ಕಿಡಿಗೇಡಿಯ ಕೃತ್ಯ ಸೆರೆ!
ಸದಾಶಿವನಗರದ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಚರ್ಚೆ ಮಾಡಿದ್ದಾರೆ.
ಈ ವೇಳೆ ರಾಜ್ಯಪಾಲರ ನಡೆ ಕುರಿತು ಕಾನೂನು ಹೋರಾಟ ಮಾಡಿ. ನಿಮಗೆ ಹೈಕಮಾಂಡ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿದ್ದರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಹಗರಣಗಳನ್ನ ಚುರುಕುಗೊಳಿಸಿ. ಬಿಜೆಪಿ ಸರ್ಕಾರದ ಹಗರಣದ ತನಿಖಾ ವರದಿ ಸಿದ್ಧವಿದ್ದರೆ ಬಿಡುಗಡೆಗೊಳಿಸಿ ಎಂದು ಸಲಹೆ ನೀಡಿದ್ದಾರೆ.
ಖರ್ಗೆ ನಿವಾಸದಲ್ಲಿ ಚರ್ಚೆ ಬಳಕ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ಗೆ ಸದ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯದ ಬಗ್ಗೆ ತಿಳಿಸಿದ್ದೇವೆ. ಏನಾಗುತ್ತೆ ನೋಡೊಣ ಎಂದಿದ್ದಾರೆ.