ಧಾರವಾಡ: ಸಿದ್ದರಾಮಯ್ಯನವರು ರಾಜೀನಾಮೆ ನೀಡಲೇ ಬೇಕೆನ್ನುವ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅವರ ಮೇಲೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಲೇ ಬೇಕಿದೆ. ಇದಾದ ನಂತರದ ರಾಜಕೀಯ ಬೆಳವಣಿಗೆಯಲ್ಲಿ ಸಿಎಂ ಪದತ್ಯಾಗ ಮಾಡುತ್ತಾರಾ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಇದರ ನಡುವೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಬದಲಾವಣೆಗಳು ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮೇಲೆ ರಾಜೀನಾಮೆಯ ಒತ್ತಡ ಹೆಚ್ಚಾಗುತ್ತಿರುವ ಕುರಿತು ಭವಿಷ್ಯ ನುಡಿದಿರುವ ಕೋಡಿ ಶ್ರೀಗಳು, ಅಭಿಮನ್ಯವಿನ ಬಿಲ್ಲಿನ ದಾರವನ್ನು ಕರ್ಣನ ಕೈಯಿಂದ ಮೋಸದಿಂದ ಕಟ್ ಮಾಡಿಸುತ್ತಾರೆ. ಮಹಾಭಾರತದಲ್ಲಿ ಕೃಷ್ಣ ಇದ್ದ, ಭೀಮ ಗೆದ್ದ ಆದರೆ ಇಲ್ಲಿ ಕೃಷ್ಣ ಇಲ್ಲ ಆದ್ದರಿಂದ ದುರ್ಯೋದನ ಗೆಲ್ಲುತ್ತಾನೆ. ಅಭಿಮನ್ಯುವಿನ ಹೆಂಡತಿ ರಣರಂಗ ಪ್ರವೇಶ ಮಾಡ್ತಾಳೆ ಎಂದು ತಿಳಿಸಿದ್ದಾರೆ.
ಒಣ ಖರ್ಜೂರ ಸೇವಿಸುವುದರಿಂದ ಈ ಎಲ್ಲಾ ಆರೋಗ್ಯಕರ ಪ್ರಯೋಜನಗಳು ಇವೆ ನೋಡಿ!
ಭೂಮಿಯಿಂದ ವಿಷ ಜತುಗಳು ಹೊರಗೆ ಬರುತ್ತವೆ. ಅವುಗಳಿಂದ ಮನುಷ್ಯ ಕುಲ ನಾಶವಾಗುತ್ತದೆ. ಈ ವಿಷ ಜಂತುಗಳು ಮನುಷ್ಯರನ್ನ ನಾಶ ಮಾಡುತ್ತವೆ. ಇದಕ್ಕೆ ಪೂರಕ ಎಂಬಂತೆ ಈಗಾಗಲೇ ಕಾಡಿನಿಂದ ಪ್ರಾಣಿಗಳು ಊರಿಗೆ ನುಗ್ಗುವುದು ನಡೆದಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುತ್ತದೆ. ಜಾಗತಿಕ ಮಟ್ಟದಲ್ಲಿ ಯುದ್ಧ ಭೀತಿ ಇದೆ. ಜನರ ಶಾಂತಿ, ಸಹನೆ, ಆರೋಗ್ಯ ಕೆಡುತ್ತದೆ. ಜಾಗತಿಕ ಮಟ್ಟದಲ್ಲಿ ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಇದೆ ಎಂದು ಹೇಳಿದರು.