ಬಾಗಲಕೋಟೆ:– ಅಯೋಧ್ಯೆ ರಾಮ ಮಂದಿರ ಮಂಡಲಾರಾಧನೆ (Mandalaradhne) ಪೂಜೆಗೆ ಮುಧೋಳ (Mudhol) ಮೂಲದ ಅರ್ಚಕ ಗುರುನಾಥ್ ಜೋಶಿ (Gurunath Joshi) ಆಯ್ಕೆಯಾಗಿದ್ದಾರೆ. ಅರ್ಚಕ ಗುರುನಾಥ್ ಜೋಶಿ ಅವರು ಮುರಗೋಡ ಚಿದಂಬರ ವೇದ ಸಂಸ್ಕೃತ ಪಾಠಶಾಲೆಯಲ್ಲಿ ಶುಕ್ಲ ಯಜುರ್ವೇದ ಅಧ್ಯಯನ ಅಧ್ಯಯನ ಮಾಡಿದ್ದಾರೆ.
ಅರ್ಚಕ ಗುರುನಾಥ್ ಜೋಶಿ ಅವರನ್ನು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಸದಸ್ಯರು, ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನತೀರ್ಥ ಶ್ರೀಗಳು ಆಯ್ಕೆ ಮಾಡಿದ್ದಾರೆ. ಅಯೋಧ್ಯೆ ರಾಮ ಮಂದಿರದಲ್ಲಿ 48 ದಿನಗಳ ಕಾಲ ಮಂಡಲಾರಾಧನೆ ನಡೆಯಲಿದೆ. ಫೆ.15, 16 ರಂದು ನಡೆಯಲಿರುವ ಮಂಡಲಾರಾಧನೆ ಪೂಜೆಯಲ್ಲಿ ಅರ್ಚಕ ಗುರುನಾಥ್ ಜೋಶಿ ಅವರು ಭಾಗಿಯಾಗಲಿದ್ದಾರೆ.
ಅರ್ಚಕ ಗುರುನಾಥ್ ಜೋಶಿ ಅವರು ಸದ್ಯ ಸದ್ಗುರು ಚಿದಂಬರ ವೈದಿಕ ಜ್ಯೋತಿಷ್ಯಾಲಯ ನಡೆಸುತ್ತಿದ್ದಾರೆ. ಈ ಹಿಂದೆ ಮುಧೋಳದ ಸಾಯಿ ಬಾಬಾ ದೇಗುಲದ ಅರ್ಚಕರಾಗಿದ್ದರು.
ಅಯೋಧ್ಯೆ ರಾಮ ಮಂದಿರ ಮಂಡಲಾರಾಧನೆಗೆ ನನ್ನನ್ನು ಆಯ್ಕೆ ಮಾಡಿದ್ದು ನಮ್ಮ ಪೂರ್ವಜರು ಮಾಡಿದ ಪುಣ್ಯ. ಇಂತಹ ಅವಕಾಶ ಸಿಕ್ಕಿದ್ದು ಎಂದು ಮರೆಯಲಾಗದು. ಪ್ರಭು ಶ್ರೀರಾಮಚಂದ್ರ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಗುರುನಾಥ ಜೋಶಿ ಹಾರೈಸಿದರು.