ಬೆಂಗಳೂರು: ಮತ್ತೆ ಟಿಕೆಟ್ಗಾಗಿ ಟೀವ್ರ ಫೈಪೋಟಿ ಶುರುವಾಗಿದೆ. ಈ ಕಗ್ಗಂಟು ಬಗೆಹರಿಸಲು ಡಿಕೆಶಿ ಹಾಗೂ ಸಿದ್ದರಾಮಯ್ಯ ಸಭೆ ಮೇಲೆ ಸಭೆ ನಡೆಸ್ತಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಎರಡೂ ಬಣದವರನ್ನು ಕರೆಸಿ ಸಭೆ ನಡೆಸಲಾಯ್ತು.. ಸಭೆಯಲ್ಲಿ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಟಿಕೆಟ್ಗಾಗಿ ಪಟ್ಟು ಹಿಡಿದ್ರು ಎಂದು ಹೇಳಲಾಗ್ತಿದೆ.. ಇನ್ನು ಈ ಮಧ್ಯೆ ಟಿಕೆಟ್ ವಿಚಾರವಾಗಿ ಚರ್ಚಿಸಲು ಶುಕ್ರವಾರ ಕೆ.ಹೆಚ್ ಮುನಿಯಪ್ಪ ಡಿಕೆ ಶಿಮಾರ್ ನಿವಾಸಕ್ಕೆ ತೆರಳಿದ್ರು..
ಈ ವೇಳೆ ಆಕ್ರೋಶಭರಿತರಾಗಿ ಮಾತನಾಡಿದ್ರು ಎಂದು ಹೇಳಲಾಗ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಚುನಾವಣಾ ಪ್ರಚಾರ ಸಮಿತಿ ಸದಸ್ಯರಾಗಿ ಎಲ್.ಹನುಮಂತರಾಯ ಅವರನ್ನು ನೇಮಕಮಾಡಿ ಎಐಸಿಸಿ ಪ್ರಕಟಣೆ ಹೊರಡಿಸಿದೆ.. ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಫೈನಲ್ ಮಾಡುವ ಸಾಧ್ಯತೆ ಹೆಚ್ಚಾಗಿದೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಇನ್ನು ಕೋಲಾರದಂತೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ವಿಚಾರಕ್ಕೆ ಫೈಟ್ ನಡೆಯುತ್ತಿದೆ. ಅಲ್ಲೂ ಕೂಡ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಬಣದ ನಡುವೆ ಫೈಟ್ ನಡೆಯುತ್ತಿದೆ.. ಸಿದ್ದರಾಮಯ್ಯ ತನ್ನ ಬೆಂಬಲಿಗ ಪರಿಷತ್ ಸದಸ್ಯ ಎಂ.ಆರ್ ಸೀತಾರಾಮ್ ಪುತ್ರ ರಕ್ಷಾ ರಾಮಯ್ಯಗೆ ಟಿಕೆಟ್ ಕೊಡಬೇಕು ಅಂತಿದ್ದಾರೆ.. ಇತ್ತ ಡಿಕೆಶಿ ವೀರಪ್ಪ ಮೊಯ್ಲಿ ಅಥವಾ ಶಿವಶಂಕರ್ ರೆಡ್ಡಿಗೆ ಕೊಡಬೇಕೆಂದು ಹೇಳ್ತಿದ್ದಾರೆ.
ಆದ್ರೆ ಅಂತಿಮವಾಗಿ ಇಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸುವ ಸಾಧ್ಯತೆ ಇದ್ದು ರಕ್ಷಾ ರಾಮಯ್ಯಗೆ ಟಿಕೆಟ್ ಫೈನಲ್ ಎಂದು ಹೇಳಲಾಗ್ತಿದೆ.. .. ಇನ್ನು ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಆಪ್ತ ಮಹದೇವಪ್ಪ ಪುತ್ರ ಸುನೀಲ್ ಬೋಸ್ಗೆ ಟಿಕೆಟ್ ಫೈನಲ್ ಆಗುವ ಸಾಧ್ಯತೆ ಇದೆ. ಒಟ್ಟಾರೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ನಲ್ಲಿ ಬಣ ಬಡಿದಾಟ ಚುರಾಗಿದೆ.. ಇದು ಚುನಾವಣೆ ಮೇಲೆ ಯಾವ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.